ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ಅವರು ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವರ್ಷಗಳಿಂದ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಜುಲೈ 10ರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸಳಿಯನ್ ಅವರ ನಿಧನದಿಂದ ತಮಿಳು ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಇಂದು (ಜುಲೈ 11) ಬೆಳಗ್ಗೆಯಿಂದಲೇ ಚಿತ್ರರಂಗದ ಅನೇಕ ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ್ದಾರೆ. 2007ರಲ್ಲಿ ಬಿಡುಗಡೆಯಾದ ತಮನ್ನಾ ಭಾಟಿಯಾ ಅಭಿನಯದ ‘ಕಲ್ಲೂರಿ’ ಚಿತ್ರದ ಮೂಲಕ ಸಳಿಯನ್ ಸಿನಿಮಾಟೊಗ್ರಾಫರ್ ಆಗಿ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ‘ಪರದೇಸಿ’, ‘ತರೈ ತಪ್ಪಟ್ಟೈ’, ‘ಜೋಕರ್’, ‘ಸವಾರಿ’ ಸೇರಿದಂತೆ ಹಲವು ಪ್ರಶಂಸಿತ ಚಿತ್ರಗಳಿಗೆ ಕ್ಯಾಮೆರಾ ಹಿಡಿದು ತಮ್ಮ ವಿಶಿಷ್ಟ ಛಾಯಾಗ್ರಹಣದ ಮೂಲಕ ಗುರುತಿಸಿಕೊಂಡಿದ್ದರು.
ವೈವಿಧ್ಯಮಯ ಕಥಾಹಂದರ ಮತ್ತು ನೈಜ ಚಿತ್ರಕಥೆ ಹೊಂದಿದ ಸಿನಿಮಾಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡುವುದರಲ್ಲಿ ಅವರು ವಿಶೇಷ ಖ್ಯಾತಿ ಪಡೆದಿದ್ದರು. ಸಿನಿಮಾಟೊಗ್ರಾಫರ್ ಆಗಿರುವುದರ ಜೊತೆಗೆ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದ ಸಳಿಯನ್, 2019ರಲ್ಲಿ ಬಿಡುಗಡೆಯಾದ ‘ಟು ಲೆಟ್’ ಚಿತ್ರವನ್ನು ನಿರ್ದೇಶಿಸಿದ್ದರು. ಚೆನ್ನೈನಲ್ಲಿ ಬಾಡಿಗೆ ಮನೆ ಹುಡುಕುವ ಮಧ್ಯಮ ವರ್ಗದ ಕುಟುಂಬದ ಕಥೆಯನ್ನು ಒಳಗೊಂಡಿದ್ದ ಈ ಚಿತ್ರ ರಾಷ್ಟ್ರ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿತ್ತು. ಸಳಿಯನ್ ಅವರ ನಿಧನಕ್ಕೆ ನಿರ್ದೇಶಕರಾದ ಬಾಲ, ಮಿಸ್ಕಿನ್, ಸಸಿಕುಮಾರ್, ಸೀಮಾನ್ ಸೇರಿದಂತೆ ತಮಿಳು ಚಿತ್ರರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…