ಅನಾರೋಗ್ಯದಿಂದ ಬಳಲುತ್ತಿದ್ದ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡಿದ್ದವು. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ತಮಿಳು ನಾಡಿನ ಡಿಎಂಡಿಕೆ ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ ಲೋಕಕ್ಕೆ ಹೋಗಿದ್ಧಾರೆ ಕ್ಯಾಪ್ಟನ್ ವಿಜಯಕಾಂತ್.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…