ಬೆಂಗಳೂರು: ಬಡವರ ಹೊಟ್ಟೆಗೆ ಒದೆಯುವುದೇ ಅಚ್ಚೇ ದಿನ್ ಎಂದು ತಿಳಿದುಕೊಂಡಿರುವ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಊಟದ ತಟ್ಟೆಯಲ್ಲಿನ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಬಡವರ ಹತ್ಯೆಗೆ ಸಮನಾದ ಪಾಪ ಕರ್ಮ ಎಂದು ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ತರಕಾರಿ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿದಿದೆ. ಈ ಹೊತ್ತಿನಲ್ಲಿ ಬಡವರ ನೆರವಿಗೆ ಬರಬೇಕಾಗಿರುವ ಕೇಂದ್ರ ಸರ್ಕಾರ ಅವರನ್ನು ಉಪವಾಸ ಬೀಳಿಸಿ, ಸಾಯಿಸಲು ಹೊರಟಿದೆ. ಇಂತಹ ಕ್ರೌರ್ಯ ಫ್ಯಾಸಿಸ್ಟ್ ಮನಸ್ಸುಗಳಿಗೆ ಮಾತ್ರ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಬ್ರ್ಯಾಂಡೆಡ್ ಅಲ್ಲದ ಪ್ಯಾಕ್ ಮಾಡಲಾಗಿರುವ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ವಸ್ತುಗಳ ಮೇಲೆ ನರೇಂದ್ರ ಮೋದಿ ಸರ್ಕಾರ ಜಿಎಸ್ಟಿ ಹೇರಿರುವುದು ಬ್ರ್ಯಾಂಡೆಡ್ ವಸ್ತುಗಳ ಕಂಪೆನಿಗಳ ಒತ್ತಡಕ್ಕೆ ಮಣಿದು ಎನ್ನುವುದು ಸ್ಪಷ್ಟ. ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ನರೇಂದ್ರ ಮೋದಿ ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಿಗಳು ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ ಎಂದಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಈ ‘ತೆರಿಗೆ ಭಯೋತ್ಪಾದನೆಗೆ ಬಲಿಯಾಗಿರುವುದು ವಿರೋಧಪಕ್ಷಗಳ ಮತದಾರರು ಮಾತ್ರವಲ್ಲ, ಅಚ್ಚೇ ದಿನಗಳ ನಿರೀಕ್ಷೆಯಿಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿದ್ದ ಬಿಜೆಪಿಯ ಮತದಾರರಿಗೂ ಇದರಲ್ಲಿ ರಿಯಾಯಿತಿ-ವಿನಾಯಿತಿ ಏನಿಲ್ಲ. ಅವರು ಕೂಡಾ ಇದಕ್ಕೆ ಬಲಿಯಾಗಿದ್ದಾರೆ ಎಂದರು.
ಇನ್ನು ಬ್ರ್ಯಾಂಡ್ ಗಳ ಬೆನ್ನತ್ತಿ ಹೋಗುತ್ತಿರುವ ಉಳ್ಳವರು, ಶ್ರೀಮಂತರು ಖರೀದಿಸುವ ವಸ್ತುಗಳ ಮೇಲೆ ತೆರಿಗೆ ಹೇರಿಕೆಗೆ ಕನಿಷ್ಠ ಸಮರ್ಥನೆ ಇದೆ. ಆದರೆ ಗುಡಿಕೈಗಾರಿಕೆಗಳ ರೂಪದಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಲಕ್ಷಾಂತರ ಕಿರುಉದ್ಯಮಿಗಳಿಗೂ ಕೂಡಾ ಇದೊಂದು ದೊಡ್ಡ ಹೊಡೆತವಾಗಿದೆ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…