Featured

ತಮ್ಮ ಜೀವನದಲ್ಲಿ ತಾನೆಂದೂ ಅಶ್ಲೀಲ ಚಿತ್ರಗಳ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾಗಿಯಾಗಿರಲಿಲ್ಲ :  ರಾಜ್ ಕುಂದ್ರಾ  – Vishwanews24

ತಮ್ಮ ಜೀವನದಲ್ಲಿ ತಾನೆಂದೂ ಅಶ್ಲೀಲ ಚಿತ್ರಗಳ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾಗಿಯಾಗಿರಲಿಲ್ಲ :  ರಾಜ್ ಕುಂದ್ರಾ  – Vishwanews24

ಮುಂಬೈ: ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಅಶ್ಲೀಲ ಚಿತ್ರ ತಯಾರಿಕಾ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನು ಪಡೆದಿದ್ದ ಉದ್ಯಮಿ ರಾಜ್ ಕುಂದ್ರಾ ಇದೇ ಮೊದಲ ಬಾರಿಗೆ ವಿವಾದದ ಕುರಿತು ಹೇಳಿಕೆ ನೀಡಿದ್ದಾರೆ.

ಸೋಮವಾರ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಮಾತನಾಡಿರುವ ರಾಜ್ ಕುಂದ್ರಾ, ‘ತಮ್ಮ ಜೀವನದಲ್ಲಿ ತಾನೆಂದೂ ಅಶ್ಲೀಲ ಚಿತ್ರಗಳ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾಗಿಯಾಗಿರಲಿಲ್ಲ. ತಮ್ಮ ವಿರುದ್ಧ ಇಡೀ ಪ್ರಕರಣ ದೊಡ್ಡ ಪಿತೂರಿಯಾಗಿದ್ದು, ಕಾಣದ ಕೈಗಳ ಆಟವಾಡುತ್ತಿವೆ. ಪಿತೂರಿಗೆ ನಾನು ಬಲಿಯಾಗಿದ್ದೇನೆ ಎಂದು ರಾಜ್ ಕುಂದ್ರಾ ಹೇಳಿದ್ದಾರೆ.

ಅಂತೆಯೇ ಮಾಧ್ಯಮಗಳ ಕುರಿತು ಅಸಮಾಧಾನ ಹೊರ ಹಾಕಿದ ರಾಜ್ ಕುಂದ್ರಾ, ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ. ಅದಾಗಲೇ ಮಾಧ್ಯಮಗಳು ನನ್ನನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿವೆ. ಮಾಧ್ಯಮಗಳು ತಮ್ಮ ಟಿಆರ್ ಪಿಗಾಗಿ ನನ್ನ ಖಾಸಗಿ ಜೀವನದ ಮೇಲೆ ದಾಳಿ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ನನ್ನ ಮೌನವನ್ನು ದೌರ್ಬಲ್ಯಕ್ಕಾಗಿ ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಾಕಷ್ಟು ಊಹಾಪೋಹಗಳು ಸತ್ಯದ ಜಾಗದಲ್ಲಿ ರಾರಾಜಿಸುತ್ತಿವೆ. ಅನೇಕ ತಪ್ಪುದಾರಿಗೆಳೆಯುವ ಮತ್ತು ಬೇಜವಾಬ್ದಾರಿ ಹೇಳಿಕೆಗಳು ಮತ್ತು ಲೇಖನಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಈಗಾಗಲೇ ಮಾಧ್ಯಮಗಳಿಂದ ತಪ್ಪಿತಸ್ಥನೆಂದು ಘೋಷಿಸಲ್ಪಟ್ಟಿದ್ದೇನೆ. ವಿವಿಧ ಹಂತಗಳಲ್ಲಿ ಮಾನವ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿ (ನಿರಂತರವಾಗಿ) ನನ್ನ ವಿರುದ್ಧ ಸುದ್ದಿ ಮಾಡುವ ಮೂಲಕ ಬಹಳಷ್ಟು ನೋವು ನೀಡಿದ್ದಾರೆ. ನಾನು ನನ್ನ ಜೀವನದಲ್ಲಿ ಎಂದಿಗೂ ಅಶ್ಲೀಲತೆಯ ಉತ್ಪಾದನೆ ಮತ್ತು ವಿತರಣೆಯಲ್ಲಿ ತೊಡಗಿಸಿಕೊಂಡಿಲ್ಲ. ಇದೊಂದು ನನ್ನ ವಿರುದ್ಧದ ದೊಡ್ಡ ಷಡ್ಯಂತ್ರ ಎಂದಷ್ಟೇ ನಾನು ಹೇಳಬಲ್ಲೆ. ವಿಷಯವು ನ್ಯಾಯಾಲಯದ ಅಧೀನವಾಗಿದೆ ಆದ್ದರಿಂದ ನಾನು ಸ್ಪಷ್ಟಪಡಿಸಲಾರೆ. ಆದರೆ ನಾನು ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ ಮತ್ತು ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದೇನೆ, ಅಲ್ಲಿ ಸತ್ಯವು ಮೇಲುಗೈ ಸಾಧಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

ಅಂತೆಯೇ ‘ಸಾಮಾಜಿಕ ಜಾಲತಾಣಗಳಲ್ಲಿನ ಟ್ರೋಲಿಂಗ್, ನಕಾರಾತ್ಮಕತೆ ಮತ್ತು ದುರ್ಬಲ ಸಾರ್ವಜನಿಕ ಗ್ರಹಿಕೆಗಳಿಂದ ನಾನು ಛಿದ್ರಗೊಂಡಿದ್ದೇನೆ. ಆದರೆ ನಾನು ಅವಮಾನದಿಂದ ನನ್ನ ಮುಖವನ್ನು ಮರೆಮಾಡುವುದಿಲ್ಲ, ನನ್ನ ಆದ್ಯತೆ ಯಾವಾಗಲೂ ನನ್ನ ಕುಟುಂಬವೇ ಆಗಿದೆ. ಈ ಸಮಯದಲ್ಲಿ ಬೇರೆ ಯಾವುದೂ ನನಗೆ ಮುಖ್ಯವಲ್ಲ. ಘನತೆಯಿಂದ ಬದುಕುವುದು ಪ್ರತಿಯೊಬ್ಬ ವ್ಯಕ್ತಿಯ ಅವಿನಾಭಾವ ಹಕ್ಕು ಎಂದು ತಾನು ನಂಬುತ್ತೇನೆ ಮತ್ತು ಅದನ್ನೇ ವಿನಂತಿಸುತ್ತೇನೆ ಎಂದು ಕುಂದ್ರಾ ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago