Featured

ತಮ್ಮ ಜೀವನದಲ್ಲಿ ತಾನೆಂದೂ ಅಶ್ಲೀಲ ಚಿತ್ರಗಳ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾಗಿಯಾಗಿರಲಿಲ್ಲ :  ರಾಜ್ ಕುಂದ್ರಾ  – Vishwanews24

ತಮ್ಮ ಜೀವನದಲ್ಲಿ ತಾನೆಂದೂ ಅಶ್ಲೀಲ ಚಿತ್ರಗಳ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾಗಿಯಾಗಿರಲಿಲ್ಲ :  ರಾಜ್ ಕುಂದ್ರಾ  – Vishwanews24

ಮುಂಬೈ: ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಅಶ್ಲೀಲ ಚಿತ್ರ ತಯಾರಿಕಾ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನು ಪಡೆದಿದ್ದ ಉದ್ಯಮಿ ರಾಜ್ ಕುಂದ್ರಾ ಇದೇ ಮೊದಲ ಬಾರಿಗೆ ವಿವಾದದ ಕುರಿತು ಹೇಳಿಕೆ ನೀಡಿದ್ದಾರೆ.

ಸೋಮವಾರ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಮಾತನಾಡಿರುವ ರಾಜ್ ಕುಂದ್ರಾ, ‘ತಮ್ಮ ಜೀವನದಲ್ಲಿ ತಾನೆಂದೂ ಅಶ್ಲೀಲ ಚಿತ್ರಗಳ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾಗಿಯಾಗಿರಲಿಲ್ಲ. ತಮ್ಮ ವಿರುದ್ಧ ಇಡೀ ಪ್ರಕರಣ ದೊಡ್ಡ ಪಿತೂರಿಯಾಗಿದ್ದು, ಕಾಣದ ಕೈಗಳ ಆಟವಾಡುತ್ತಿವೆ. ಪಿತೂರಿಗೆ ನಾನು ಬಲಿಯಾಗಿದ್ದೇನೆ ಎಂದು ರಾಜ್ ಕುಂದ್ರಾ ಹೇಳಿದ್ದಾರೆ.

ಅಂತೆಯೇ ಮಾಧ್ಯಮಗಳ ಕುರಿತು ಅಸಮಾಧಾನ ಹೊರ ಹಾಕಿದ ರಾಜ್ ಕುಂದ್ರಾ, ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ. ಅದಾಗಲೇ ಮಾಧ್ಯಮಗಳು ನನ್ನನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿವೆ. ಮಾಧ್ಯಮಗಳು ತಮ್ಮ ಟಿಆರ್ ಪಿಗಾಗಿ ನನ್ನ ಖಾಸಗಿ ಜೀವನದ ಮೇಲೆ ದಾಳಿ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

ನನ್ನ ಮೌನವನ್ನು ದೌರ್ಬಲ್ಯಕ್ಕಾಗಿ ತಪ್ಪಾಗಿ ಅರ್ಥೈಸಲಾಗುತ್ತಿದೆ. ಸಾಕಷ್ಟು ಊಹಾಪೋಹಗಳು ಸತ್ಯದ ಜಾಗದಲ್ಲಿ ರಾರಾಜಿಸುತ್ತಿವೆ. ಅನೇಕ ತಪ್ಪುದಾರಿಗೆಳೆಯುವ ಮತ್ತು ಬೇಜವಾಬ್ದಾರಿ ಹೇಳಿಕೆಗಳು ಮತ್ತು ಲೇಖನಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಈಗಾಗಲೇ ಮಾಧ್ಯಮಗಳಿಂದ ತಪ್ಪಿತಸ್ಥನೆಂದು ಘೋಷಿಸಲ್ಪಟ್ಟಿದ್ದೇನೆ. ವಿವಿಧ ಹಂತಗಳಲ್ಲಿ ಮಾನವ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿ (ನಿರಂತರವಾಗಿ) ನನ್ನ ವಿರುದ್ಧ ಸುದ್ದಿ ಮಾಡುವ ಮೂಲಕ ಬಹಳಷ್ಟು ನೋವು ನೀಡಿದ್ದಾರೆ. ನಾನು ನನ್ನ ಜೀವನದಲ್ಲಿ ಎಂದಿಗೂ ಅಶ್ಲೀಲತೆಯ ಉತ್ಪಾದನೆ ಮತ್ತು ವಿತರಣೆಯಲ್ಲಿ ತೊಡಗಿಸಿಕೊಂಡಿಲ್ಲ. ಇದೊಂದು ನನ್ನ ವಿರುದ್ಧದ ದೊಡ್ಡ ಷಡ್ಯಂತ್ರ ಎಂದಷ್ಟೇ ನಾನು ಹೇಳಬಲ್ಲೆ. ವಿಷಯವು ನ್ಯಾಯಾಲಯದ ಅಧೀನವಾಗಿದೆ ಆದ್ದರಿಂದ ನಾನು ಸ್ಪಷ್ಟಪಡಿಸಲಾರೆ. ಆದರೆ ನಾನು ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ ಮತ್ತು ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದೇನೆ, ಅಲ್ಲಿ ಸತ್ಯವು ಮೇಲುಗೈ ಸಾಧಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

ಅಂತೆಯೇ ‘ಸಾಮಾಜಿಕ ಜಾಲತಾಣಗಳಲ್ಲಿನ ಟ್ರೋಲಿಂಗ್, ನಕಾರಾತ್ಮಕತೆ ಮತ್ತು ದುರ್ಬಲ ಸಾರ್ವಜನಿಕ ಗ್ರಹಿಕೆಗಳಿಂದ ನಾನು ಛಿದ್ರಗೊಂಡಿದ್ದೇನೆ. ಆದರೆ ನಾನು ಅವಮಾನದಿಂದ ನನ್ನ ಮುಖವನ್ನು ಮರೆಮಾಡುವುದಿಲ್ಲ, ನನ್ನ ಆದ್ಯತೆ ಯಾವಾಗಲೂ ನನ್ನ ಕುಟುಂಬವೇ ಆಗಿದೆ. ಈ ಸಮಯದಲ್ಲಿ ಬೇರೆ ಯಾವುದೂ ನನಗೆ ಮುಖ್ಯವಲ್ಲ. ಘನತೆಯಿಂದ ಬದುಕುವುದು ಪ್ರತಿಯೊಬ್ಬ ವ್ಯಕ್ತಿಯ ಅವಿನಾಭಾವ ಹಕ್ಕು ಎಂದು ತಾನು ನಂಬುತ್ತೇನೆ ಮತ್ತು ಅದನ್ನೇ ವಿನಂತಿಸುತ್ತೇನೆ ಎಂದು ಕುಂದ್ರಾ ಹೇಳಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago