ಬೆಂಗಳೂರು,:ಕಾಂಗ್ರೆಸ್ನ ಕೆಲವು ಪ್ರಭಾವಿ ನಾಯಕರು ನನ್ನ ಹೆಸರನ್ನು ಡ್ಯಾಮೇಜ್ ಮಾಡಲು ಷಡ್ಯಂತ್ರ ನಡೆಸುತ್ತಿದ್ದಾರೆ ..ನಾನು ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ. ಹೋಗುವುದೂ ಇಲ್ಲ ನಮ್ಮ ಪಕ್ಷದ ಕೆಲವು ಸ್ವಯಂಘೋಷಿತ ನಾಯಕರೇ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸಿಡಿದೆದ್ದಾರೆ.
ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಗರದಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗಿಲ್ಲ. ಮುಂಬೈಗೂ ಹೋಗಿಲ್ಲ. ಡೆಲ್ಲಿಗೂ ಹೋಗಿಲ್ಲ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲೇ ಇದ್ದೇನೆ. ನನ್ನ ಹೆಸರಿಗೆ ಮಸಿ ಬಳಿಯಲು ಕೆಲವರು ಈ ರೀತಿ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ತಮ್ಮ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದರು.
ಇದೇ ಸಮಯದಲ್ಲಿ ಕಾಂಗ್ರೆಸ್ನಲ್ಲಿ ಆಂತರಿಕ ಕಿತ್ತಾಟ ಇತ್ತು ಎನ್ನುವುದನ್ನು ಒಪ್ಪಿಕೊಂಡ ಜಾರಕಿಹೊಳಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಮಧ್ಯಸ್ತಿಕೆ ವಹಿಸಿಕೊಂಡು ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು. ಅಲ್ಲಿಗೆ ಅದು ಮುಗಿದ ಅಧ್ಯಾಯ. ಆದರೂ ಪದೇ ಪದೇ ನನ್ನ ಮೇಲೆ ಅಪಪ್ರಚಾರ ಮಾಡುವಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ನಾನು ಸಹಿಸುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…