ಕೊಪ್ಪಳ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಭಿಮಾನಿ ಮೇಲಿನ ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಜಿಲ್ಲೆಯ ನೂತನ ಕುಕನೂರು ತಾಲೂಕಿನ ದ್ಯಾಂಪುರದ ನಿವಾಸಿಯಾಗಿರುವ ರೈತ ಮಂಜುನಾಥ ಅವರು ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ಶಾಸ್ತ್ರೋಕ್ತವಾಗಿ ಬುಧವಾರ ಬಂಧು-ಬಾಂಧವರ ಸಮ್ಮುಖದಲ್ಲಿ ನಾಮಕರಣ ಮಾಡಿದ್ದಾರೆ. ಮಂಜುನಾಥ ಹಾಗೂ ನೇತ್ರಾವತಿ ದಂಪತಿಗೆ ಜನಿಸಿರುವ ಮೊದಲ ಗಂಡು ಮಗುವಿಗೆ ಸಿದ್ದರಾಮಯ್ಯ ಎಂದು ಹೆಸರು ಇಟ್ಟಿದ್ದಾರೆ. ಈ ಮೂಲಕ ಅವರು ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಸೇರಿದಂತೆ ಅನೇಕ ಜನೋಪಯೋಗಿ ಯೋಜನೆಗಳನ್ನು ಜಾರಿ ಮಾಡಿದ್ದರು. ಇಂತಹ ಅನೇಕ ಯೋಜನೆಗಳನ್ನು ಮೆಚ್ಚಿಕೊಂಡ ಮಂಜುನಾಥ ಅಂದಿನಿಂದ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿಯಾಗಿದ್ದಾರೆ. ಹೀಗಾಗಿ ತಮ್ಮ ನಾಯಕನ ಬಗೆಗಿನ ಅಭಿಮಾನವನ್ನು ಯಾವ ರೀತಿ ವ್ಯಕ್ತಪಡಿಸಬೇಕು ಎಂದುಕೊಂಡಾಗ ತಮಗೆ ಜನಿಸಿದ ಮೊದಲ ಗಂಡು ಮಗುವಿಗೆ ಸಿದ್ದರಾಮಯ್ಯ ಎಂದು ಹೆಸರಿಡಲು ನಿರ್ಧರಿಸಿದ್ದಾರೆ.
ಅದರಂತೆ ಬುಧವಾರ ತಮ್ಮ ಮನೆಯಲ್ಲಿ ನಾಮಕರಣ ಕಾರ್ಯಕ್ರಮವನ್ನು ಬಂಧು-ಬಾಂಧವರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಏರ್ಪಡಿಸಿ ಮಗುವನ್ನು ತೊಟ್ಟಿಲಿಗೆ ಹಾಕಿದ್ದಾರೆ. ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಜನಪರ ಕಾಳಜಿ, ಯೋಜನೆಗಳನ್ನು ಮೆಚ್ಚಿ ಅವರ ಕಟ್ಟಾ ಅಭಿಮಾನಿಯಾಗಿರುವೆ. ಹೀಗಾಗಿ ಅವರ ಹೆಸರನ್ನು ನನ್ನ ಮಗನಿಗೆ ನಾಮಕರಣ ಮಾಡಿದ್ದೇನೆ ಎಂದು ಮಗುವಿನ ತಂದೆ ಮಂಜುನಾಥ ಅವರು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…