Featured

ತಮ್ಮ ಮಗುವಿನ ಒಂದನೇ ವರ್ಷದ ಹುಟ್ಟುಹಬ್ಬವನ್ನು ದೇವರ ಮಕ್ಕಳೊಂದಿಗೆ ಆಚರಿಸಿ ಮಾನವೀಯತೆ ಮೆರೆದ ಪಡುಬಿದ್ರಿ ಭಗವತಿ ಗ್ರೂಪಿನ ಸದಸ್ಯರಾದ ಶ್ರೀ ಸುಹಾಸ್ ಶೆಟ್ಟಿ ನಟವರ್ಯ ದಂಪತಿಗಳು- Vishwanews24

ಪಡುಬಿದ್ರಿ :ಪಡುಬಿದ್ರಿ ಹಿಂದೂ ಜಾಗರಣ ವೇದಿಕೆ‌ ಸಹಸಂಚಾಲಕ, ನಂದಿಕೂರು ಶಾಲಾ‌ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಪಡುಬಿದ್ರಿ ಭಗವತಿ ಗ್ರೂಪಿನ ಸದಸ್ಯರಾದ ಶ್ರೀ ಸುಹಾಸ್ ಶೆಟ್ಟಿ ನಟವರ್ಯ ಮತ್ತು ಶ್ರೀಮತಿ ಜಯಶ್ರೀ ಇವರ ಸುಪುತ್ರ ಮಾ|ಹರ್ಷಿಲ್ ಇವರ ಒಂದನೇ ವರ್ಷದ ಹುಟ್ಟು ಹಬ್ಬವನ್ನು ವಿಜೇತ ವಿಶೇಷ ಶಾಲೆಯಲ್ಲಿ ದೇವರ ಮಕ್ಕಳೊಂದಿಗೆ ಆಚರಿಸಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು ಮತ್ತು ಶಾಲೆಗೆ ಮಗನ ಹುಟ್ಟುಹಬ್ಬದ ಪ್ರಯುಕ್ತ ರೂ 5000‌ ದೇಣಿಗೆಯಾಗಿ ನೀಡಿದರು.

ಹಲವಾರು ಸಮಾಜಮುಖಿ ಕಾರ್ಯಗಳೊಂದಿಗೆ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿಯವರೂ ಹಿಂದಿನಿಂದಲೂ ವಿಜೇತ ವಿಶೇಷ ಶಾಲೆಯ ದೇವರ ಮಕ್ಕಳಿಗೆ ಸಹಾಯಹಸ್ತಿಗಳಾಗಿದ್ದು,ಪ್ರಸ್ತುತ ತಮ್ಮ ಸ್ವಂತ ಮಗನ ಹುಟ್ಟು ಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಆಚರಿಸುವ ಮೂಲಕ ಆಡಂಬರದ ಆಚರಣೆಗೆ ವಿಮುಕ್ತಿ ನೀಡಿ ಮಾನವೀಯ ಮೌಲ್ಯಕ್ಕೆ ಮನ್ನಣೆ ನೀಡಿದ್ದು,ಸರ್ವರ ಶ್ಲಾಘನೆಗೆ ಪಾತ್ರರಾಗಿದ್ದರೆ.

ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಭಗವತಿ ಗ್ರೂಪಿನ ಸದಸ್ಯರಾದ ಯುವರಾಜ್ ಕುಲಾಲ್, ಸಂದೇಶ್ ಪಾದೆಬೆಟ್ಟು, ಸಂತೋಷ ನಂದಿಕೂರು, ಸುಜಿತ್ ಕುಲಾಲ್ , ಅಕ್ಷಿತ್ ಭಂಡಾರಿ, ಸಂತೋಷ ಶೆಟ್ಟಿ ಪಾದೆಬೆಟ್ಟು, ದಿಲೀಪ್ ಕುಮಾರ್ ಕಾಸರಗೋಡು, ಮನೋಹರ್ ಬಾಲು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago