Featured

ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಕಚೇರಿಗೆ ಬರುವ ಮೂಲಕ ಎಲ್ಲರಿಗೂ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ,  : ಪ್ರತಿನಿತ್ಯ ಹವಾನಿಯಂತ್ರಿತ ವಾಹನದಲ್ಲಿ ಓಡಾಡುತ್ತಿದ್ದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಮ್ಮ ಕಾರು, ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಆಗಮಿಸುತ್ತಿದ್ದ ಇತರೆ ಸಿಬ್ಬಂದಿಗಳು, ಗುರುವಾರ ಸಾರ್ವಜನಿಕ ಸಾರಿಗೆ ಕಲ್ಪನೆಯಲ್ಲಿ, ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ನಿರ್ದೇಶನದಲ್ಲಿ ಎಲ್ಲರೂ ಒಂದೇ ವಾಹನದಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಬರುವ ಮೂಲಕ ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ಬಳಕೆಗೆ ಎಲ್ಲರಿಗೂ ಮಾದರಿಯಾದರು.

ಗುರುವಾರ ಬೆಳಗ್ಗೆ 9.30 ಜಿಲ್ಲಾಧಿಕಾರಿ ನಿವಾಸದಿಂದ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ತಮ್ಮ ಅಧಿಕೃತ ಸರಕಾರಿ ವಾಹನವನ್ನು ಮನೆಯಲ್ಲಿಯೇ ಬಿಟ್ಟು, ತಮ್ಮ ವಾಹನ ಚಾಲಕ ಮತ್ತು ಅಂಗರಕ್ಷಕನೊಂದಿಗೆ ಸಾರ್ವಜನಿಕ ವಾಹನ ಏರಿದರು, ಜಿಲ್ಲಾಧಿಕಾರಿ ನಿವಾಸ ಪಕ್ಕದಲ್ಲೇ ಇರುವ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಹ ತಮ್ಮ ವಾಹನ ಬಿಟ್ಟು ಜಿಲ್ಲಾಧಿಕಾರಿಗೆ ಸಾಥ್ ನೀಡಿದರು, ಅಜ್ಜರಕಾಡು ನ ವಸತಿಗೃಹದಲ್ಲಿರುವ ವಿವಿಧ ಅಧಿಕಾರಿಗಳು ಸಹ ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಏರಿದರು, ವಸತಿಗೃಹದಲ್ಲಿರುವ ವಿವಿಧ ಇಲಾಖೆಯ ಸಿಬ್ಬಂದಿಗಳು ಸಹ ಇವರನ್ನು ಸೇರಿಕೊಂಡರು.

ಜಿಲ್ಲಾಧಿಕಾರಿ ನಿವಾಸದಿಂದ ಹೊರಟ ವಾಹನ, ಬನ್ನಂಜೆಯ ತಾಲೂಕು ಕಚೇರಿ ಮಾರ್ಗವಾಗಿ, ಸಿಟಿ ಬಸ್ ನಿಲ್ದಾಣ, ಎಂಜಿಎಂ ಕಾಲೇಜು ಮಾರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ತೆರಳಲು ಕಾಯುತ್ತಿದ್ದ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಬೆಳಗ್ಗೆ 9.50 ಕ್ಕೆ ಸರಿಯಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ವಾರದಲ್ಲಿ ಒಂದು ದಿನವಾದರೂ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಸಾರಿಗೆ ಬಳಸುವುದರ ಮೂಲಕ, ವಾತಾವರಣದಲ್ಲಿ ಇಂಗಾಲದ ಅಂಶ ಕಡಿಮೆ ಮಾಡುವುದರ ಜೊತೆಗೆ ವಾಯು ಮಾಲಿನ್ಯ ನಿಯಂತ್ರಣ ಸಹ ಸಾಧ್ಯವಾಗಲಿದೆ, ಜೊತೆಗೆ ಸಾರ್ವಜನಿಕ ಸಾರಿಗೆಗೂ ಸಹ ಉತ್ತೇಜನ ದೊರೆಯಲಿದೆ ಎಂಬ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಈ ಚಿಂತನೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಪ್ರತಿ ಗುರುವಾರ, ಈ ರೀತಿಯ ಸಾರ್ವಜನಿಕ ಸಮೂಹ ಸಾರಿಗೆ ಬಳಸಲು ನಿರ್ಧರಿಸಿದ್ದಾರೆ.

ಸಂಜೆ 5.30 ಕ್ಕೆ ಕಚೇರಿ ಸಮಯ ಮುಕ್ತಾಯದ ನಂತರವೂ ಸಹ ಸಾರ್ವಜನಿಕ ವಾಹನದಲ್ಲಿಯೇ ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ತೆರಳಿದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

23 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

24 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

24 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago