Featured

ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಕಚೇರಿಗೆ ಬರುವ ಮೂಲಕ ಎಲ್ಲರಿಗೂ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ,  : ಪ್ರತಿನಿತ್ಯ ಹವಾನಿಯಂತ್ರಿತ ವಾಹನದಲ್ಲಿ ಓಡಾಡುತ್ತಿದ್ದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಮ್ಮ ಕಾರು, ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಆಗಮಿಸುತ್ತಿದ್ದ ಇತರೆ ಸಿಬ್ಬಂದಿಗಳು, ಗುರುವಾರ ಸಾರ್ವಜನಿಕ ಸಾರಿಗೆ ಕಲ್ಪನೆಯಲ್ಲಿ, ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ನಿರ್ದೇಶನದಲ್ಲಿ ಎಲ್ಲರೂ ಒಂದೇ ವಾಹನದಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಬರುವ ಮೂಲಕ ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ಬಳಕೆಗೆ ಎಲ್ಲರಿಗೂ ಮಾದರಿಯಾದರು.

ಗುರುವಾರ ಬೆಳಗ್ಗೆ 9.30 ಜಿಲ್ಲಾಧಿಕಾರಿ ನಿವಾಸದಿಂದ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ತಮ್ಮ ಅಧಿಕೃತ ಸರಕಾರಿ ವಾಹನವನ್ನು ಮನೆಯಲ್ಲಿಯೇ ಬಿಟ್ಟು, ತಮ್ಮ ವಾಹನ ಚಾಲಕ ಮತ್ತು ಅಂಗರಕ್ಷಕನೊಂದಿಗೆ ಸಾರ್ವಜನಿಕ ವಾಹನ ಏರಿದರು, ಜಿಲ್ಲಾಧಿಕಾರಿ ನಿವಾಸ ಪಕ್ಕದಲ್ಲೇ ಇರುವ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಹ ತಮ್ಮ ವಾಹನ ಬಿಟ್ಟು ಜಿಲ್ಲಾಧಿಕಾರಿಗೆ ಸಾಥ್ ನೀಡಿದರು, ಅಜ್ಜರಕಾಡು ನ ವಸತಿಗೃಹದಲ್ಲಿರುವ ವಿವಿಧ ಅಧಿಕಾರಿಗಳು ಸಹ ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಏರಿದರು, ವಸತಿಗೃಹದಲ್ಲಿರುವ ವಿವಿಧ ಇಲಾಖೆಯ ಸಿಬ್ಬಂದಿಗಳು ಸಹ ಇವರನ್ನು ಸೇರಿಕೊಂಡರು.

ಜಿಲ್ಲಾಧಿಕಾರಿ ನಿವಾಸದಿಂದ ಹೊರಟ ವಾಹನ, ಬನ್ನಂಜೆಯ ತಾಲೂಕು ಕಚೇರಿ ಮಾರ್ಗವಾಗಿ, ಸಿಟಿ ಬಸ್ ನಿಲ್ದಾಣ, ಎಂಜಿಎಂ ಕಾಲೇಜು ಮಾರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ತೆರಳಲು ಕಾಯುತ್ತಿದ್ದ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಬೆಳಗ್ಗೆ 9.50 ಕ್ಕೆ ಸರಿಯಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ವಾರದಲ್ಲಿ ಒಂದು ದಿನವಾದರೂ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಸಾರಿಗೆ ಬಳಸುವುದರ ಮೂಲಕ, ವಾತಾವರಣದಲ್ಲಿ ಇಂಗಾಲದ ಅಂಶ ಕಡಿಮೆ ಮಾಡುವುದರ ಜೊತೆಗೆ ವಾಯು ಮಾಲಿನ್ಯ ನಿಯಂತ್ರಣ ಸಹ ಸಾಧ್ಯವಾಗಲಿದೆ, ಜೊತೆಗೆ ಸಾರ್ವಜನಿಕ ಸಾರಿಗೆಗೂ ಸಹ ಉತ್ತೇಜನ ದೊರೆಯಲಿದೆ ಎಂಬ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಈ ಚಿಂತನೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಪ್ರತಿ ಗುರುವಾರ, ಈ ರೀತಿಯ ಸಾರ್ವಜನಿಕ ಸಮೂಹ ಸಾರಿಗೆ ಬಳಸಲು ನಿರ್ಧರಿಸಿದ್ದಾರೆ.

ಸಂಜೆ 5.30 ಕ್ಕೆ ಕಚೇರಿ ಸಮಯ ಮುಕ್ತಾಯದ ನಂತರವೂ ಸಹ ಸಾರ್ವಜನಿಕ ವಾಹನದಲ್ಲಿಯೇ ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ತೆರಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago