ಕೋಲ್ಕತ್ತಾ:ತರಕಾರಿ ಮಳಿಗೆಗೆ ನುಗ್ಗಿದ ಕಳ್ಳರು ಹಣ ಬಿಟ್ಟು ಈರುಳ್ಳಿಯನ್ನು ಕಳ್ಳತನ ಮಾಡಿದ್ದಾರೆ.
ಈರುಳ್ಳಿ ಅಂಗಡಿಯನ್ನು ಹೊಂದಿರುವ ಅಕ್ಷಯ್ ಎಂಬ ವ್ಯಾಪರಿಯೊಬ್ಬರು ಬುಧವಾರ ಬೆಳಗ್ಗೆ ಅಂಗಡಿಗೆ ಬಂದು ನೋಡಿದಾಗ ವಸ್ತುಗಳೆಲ್ಲಾ ಚದುರಿಕೊಂಡಿದ್ದು ಈರುಳ್ಳಿ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಸುಮಾರು 50 ಸಾವಿರ ಬೆಳೆಬಾಳುವ ಈರುಳ್ಳಿಯೊಂದಿಗೆ ಬೆಳ್ಳುಳ್ಳಿ ಮತ್ತು ಶುಂಠಿಯೂ ಕಳ್ಳತನವಾಗಿದೆ.
ಈ ಬಗ್ಗೆ ಅಚ್ಚರಿಯಿಂದ ಪ್ರತಿಕ್ರಿಯಿಸಿದ ಮಾಲೀಕ, ಮಂಗಳವಾರ ಮಳೆಗೆಗೆ ಬಂದು ನೋಡಿದಾಗ ಶಾಕ್ ಆಯ್ತು. ತಕ್ಷಣ ಗಲ್ಲಾ ಪೆಟ್ಟಿಗೆ ತೆರೆದು ನೋಡಿದರೆ ಅದರಲ್ಲಿದ್ದ ಹಣವೆಲ್ಲಾ ಹಾಗೆಯೇ ಇದೆ. ಆದರೆ ಮಳಿಗೆಯಲ್ಲಿ ಜೋಡಿಸಿಟ್ಟಿದ್ದ ಈರುಳ್ಳಿ ನಾಪತ್ತೆಯಾಗಿತ್ತು. ಅದರ ಜೊತೆಗೆ ಶುಂಠಿ, ಬೆಳ್ಳುಳ್ಳಿ ಕೂಡ ಕಳ್ಳತನವಾಗಿತ್ತು. ಸುಮಾರು 50 ಸಾವಿರ ರೂ. ಮೌಲ್ಯದ ಈರುಳ್ಳಿ ಜೊತೆಗೆ ಬೆಳ್ಳುಳ್ಳಿ ಮತ್ತು ಶುಂಠಿಯನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಆದರೆ ಒಂದು ನಯಾಪೈಸೆ ಹಣವನ್ನು ಕಂಡೊಯ್ದಿಲ್ಲ ಎಂದು ತಿಳಿಸಿದ್ದಾರೆ.
ಈರುಳ್ಳಿ ಬೆಲೆ ಏರಿಕೆಯಾಗಿ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಈರುಳ್ಳಿ ಕೈಗೆ ಸಿಗದ ನಕ್ಷತ್ರವಾಗಿದೆ. ಬೆಂಗಳೂರಿನ ನಗರದ ಹಾಪ್ಕಾಮ್ಸ್, ಯಶವಂತಪುರ ಸೇರಿದಂತೆ ಇತರೆ ಮಾರುಕಟ್ಟೆಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಒಂದು ಕೆಜಿಗೆ 120 ರೂಪಾಯಿ ಆಗಿದೆ. ಮಧ್ಯಮ ಮತ್ತು ಸಣ್ಣ ಗಾತ್ರದ ಈರುಳ್ಳಿ ಬೆಲೆ 50 ರಿಂದ 60 ರೂಪಾಯಿ ಇದೆ.
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…