ಮಂಗಳೂರು,: ಗೋಕಳ್ಳರಿಗೆ ಪೊಲೀಸರು ನೆರವು ನೀಡುತ್ತಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಪಿಸಿದ್ದು, ತಲವಾರು ಹಿಡಿದ ಗೋಕಳ್ಳರಿಗೆ ಅದೇ ತಲವಾರಿನಿಂದ ಉತ್ತರ ಕೊಡಲು ನಮಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂದಾರು ಬಳಿ ಅಕ್ರಮ ಗೋಸಾಗಟದಲ್ಲಿ ಮೂರು ಹಸುಗಳನ್ನು ಅಮಾನುಷ ರೀತಿಯಲ್ಲಿ ಕಟ್ಟಿ ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದ ಗೋಕಳ್ಳರನ್ನು ಉಪ್ಪಿನಂಗಡಿಯ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಖಚಿತ ಮಾಹಿತಿಯ ಮೇರೆಗೆ ಗೋಕಳ್ಳರ ವಾಹನ ತಡೆದು ಗೋಕಳ್ಳರನ್ನು ಹಿಡಿದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಗೋಕಳ್ಳರನ್ನು ಹಿಡಿದುಕೊಟ್ಟರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನೇ ವಶಕ್ಕೆ ಪಡೆದು ಬಂಧಿಸಿ ಕೇಸು ದಾಖಲು ಮಾಡಿದ್ದಾರೆ.
ಹಲ್ಲೆಗೈದವರ ಬಂಧನ ವಿರೋಧಿಸಿ ಸಂಘಪರಿವಾರ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ, ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಶಾಸಕ ಹರೀಶ್ ಪೂಂಜಾ ಮಾತನಾಡಿ, ಇಂತಹ ಘಟನೆ ನಡೆದಾಗ ಸಾರ್ವಜನಿಕರು ಸೇರುವುದು ಸಹಜ. ಪೊಲೀಸರು ಸಾರ್ವಜನಿಕರಿಗೆ ಲಾಠಿಚಾರ್ಜ್ ಮಾಡಿದ್ದಾರೆ. ಅಲ್ಲಿದ್ದ ವಾಹನಗಳನ್ನು ಯಾವುದೇ ಸುರಕ್ಷತೆಯಿಲ್ಲದೆ ಲಾರಿಯಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ಪ್ರಧಾನ ಆರೋಪಿಯನ್ನು ಬಿಟ್ಟು ಸ್ಥಳದಲ್ಲಿದ್ದ ಮೂವರನ್ನು ಶರ್ಟ್ ಪ್ಯಾಂಟ್ ಬಿಚ್ಚಿಸಿ ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು.
‘ಪೊಲೀಸ್ ಇಲಾಖೆಯ ಮಾನಸಿಕತೆ ಏನು ಎಂದು ನಾನು ಪ್ರಶ್ನಿಸುತ್ತಿದ್ದೇನೆ. ಗೋಕಳ್ಳರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ. ಗೋಕಳ್ಳತನ ತಡೆದ ಜನರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ನಾವು ಗೋವಿನ ವಿಚಾರದಲ್ಲಿ ಹಿಂದುತ್ವದ ವಿಚಾರದಲ್ಲಿ ಪ್ರಾಣಕ್ಕೆ ಪ್ರಾಣ ಕೊಡಲು ಸಿದ್ಧವಿದ್ದೇವೆ. ಶಾಸಕ ಎನ್ನುವುದಕ್ಕೆ ಮೊದಲು ನಾನು ಹಿಂದೂ. ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ‘ಎಲ್ಲದಕ್ಕೂ ಸಿದ್ಧ’ವಾಗಿದ್ದೇವೆ. ತಲವಾರು ಹಿಡಿದು ಗೋಕಳ್ಳತನ ಮಾಡುವವರಿಗೆ ಅದೇ ತಲವಾರಿನಿಂದ ಉತ್ತರ ಕೊಡಲು ನಮಗೆ ಗೊತ್ತಿದೆ’ ಎಂದವರು ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…