Featured

ತಲವಾರು ಹಿಡಿದ ಗೋಕಳ್ಳರಿಗೆ ಅದೇ ತಲವಾರಿನಿಂದ ಉತ್ತರ ಕೊಡಲು ನಮಗೆ ಗೊತ್ತಿದೆ :ಶಾಸಕ ಹರೀಶ್ ಪೂಂಜಾ -Vishwanews24

ಮಂಗಳೂರು,: ಗೋಕಳ್ಳರಿಗೆ ಪೊಲೀಸರು ನೆರವು ನೀಡುತ್ತಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಪಿಸಿದ್ದು, ತಲವಾರು ಹಿಡಿದ ಗೋಕಳ್ಳರಿಗೆ ಅದೇ ತಲವಾರಿನಿಂದ ಉತ್ತರ ಕೊಡಲು ನಮಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಂದಾರು ಬಳಿ ಅಕ್ರಮ ಗೋಸಾಗಟದಲ್ಲಿ ಮೂರು ಹಸುಗಳನ್ನು ಅಮಾನುಷ ರೀತಿಯಲ್ಲಿ ಕಟ್ಟಿ ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದ ಗೋಕಳ್ಳರನ್ನು ಉಪ್ಪಿನಂಗಡಿಯ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಖಚಿತ ಮಾಹಿತಿಯ ಮೇರೆಗೆ ಗೋಕಳ್ಳರ ವಾಹನ ತಡೆದು ಗೋಕಳ್ಳರನ್ನು ಹಿಡಿದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಗೋಕಳ್ಳರನ್ನು ಹಿಡಿದುಕೊಟ್ಟರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನೇ ವಶಕ್ಕೆ ಪಡೆದು ಬಂಧಿಸಿ ಕೇಸು ದಾಖಲು ಮಾಡಿದ್ದಾರೆ.

ಹಲ್ಲೆಗೈದವರ ಬಂಧನ ವಿರೋಧಿಸಿ ಸಂಘಪರಿವಾರ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ, ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಶಾಸಕ ಹರೀಶ್ ಪೂಂಜಾ ಮಾತನಾಡಿ, ಇಂತಹ ಘಟನೆ ನಡೆದಾಗ ಸಾರ್ವಜನಿಕರು ಸೇರುವುದು ಸಹಜ. ಪೊಲೀಸರು ಸಾರ್ವಜನಿಕರಿಗೆ ಲಾಠಿಚಾರ್ಜ್ ಮಾಡಿದ್ದಾರೆ. ಅಲ್ಲಿದ್ದ ವಾಹನಗಳನ್ನು ಯಾವುದೇ ಸುರಕ್ಷತೆಯಿಲ್ಲದೆ ಲಾರಿಯಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ಪ್ರಧಾನ ಆರೋಪಿಯನ್ನು ಬಿಟ್ಟು ಸ್ಥಳದಲ್ಲಿದ್ದ ಮೂವರನ್ನು ಶರ್ಟ್ ಪ್ಯಾಂಟ್ ಬಿಚ್ಚಿಸಿ ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು.

‘ಪೊಲೀಸ್ ಇಲಾಖೆಯ ಮಾನಸಿಕತೆ ಏನು ಎಂದು ನಾನು ಪ್ರಶ್ನಿಸುತ್ತಿದ್ದೇನೆ. ಗೋಕಳ್ಳರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ. ಗೋಕಳ್ಳತನ ತಡೆದ ಜನರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ನಾವು ಗೋವಿನ ವಿಚಾರದಲ್ಲಿ ಹಿಂದುತ್ವದ ವಿಚಾರದಲ್ಲಿ ಪ್ರಾಣಕ್ಕೆ ಪ್ರಾಣ ಕೊಡಲು ಸಿದ್ಧವಿದ್ದೇವೆ. ಶಾಸಕ ಎನ್ನುವುದಕ್ಕೆ ಮೊದಲು ನಾನು ಹಿಂದೂ. ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ‘ಎಲ್ಲದಕ್ಕೂ ಸಿದ್ಧ’ವಾಗಿದ್ದೇವೆ. ತಲವಾರು ಹಿಡಿದು ಗೋಕಳ್ಳತನ ಮಾಡುವವರಿಗೆ ಅದೇ ತಲವಾರಿನಿಂದ ಉತ್ತರ ಕೊಡಲು ನಮಗೆ ಗೊತ್ತಿದೆ’ ಎಂದವರು ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago