Featured

ತವರು ಸೇರಿದ ಕರಾವಳಿ ಮೂಲದ ಕುವೈತ್‌ನಲ್ಲಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರು -Vishwanews24

ಮಂಗಳೂರು,: ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು ಇಂದು ಬೆಳಗ್ಗೆ ಮರಳಿ ತವರು ಸೇರಿದ್ದಾರೆ. ಈ ಸಂತ್ರಸ್ತ ಯುವಕರನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರು ನಗರದ ಪಂಪ್ವೆಲ್ ಬಳಿ ಸ್ವಾಗತಿಸಿದ್ದಾರೆ.

ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.

ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ನ ಕುವೈತ್‌ ಶಾಖೆಯ ಸದಸ್ಯ ಮಂಜೇಶ್ವರ ಮೋಹನದಾಸ್‌ ಕಾಮತ್‌, ಅನಿವಾಸಿ ಭಾರತೀಯರಾದ ರಾಜ್‌ ಭಂಡಾರಿ, ಮಾಧವ ನಾಯಕ್, ವಿಜಯ್‌ ಫರ್ನಾಂಡಿಸ್‌ ಕುವೈತ್‌ ವಿಮಾನ ನಿಲ್ದಾಣದಲ್ಲಿ ಈ ಕಾರ್ಮಿಕರನ್ನು ಬೀಳ್ಕೊಟ್ಟಿದ್ದರು. ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ.

ಈ 19 ಮಂದಿಗೆ ಕುವೈತ್‌ನಿಂದ ಮುಂಬೈಗೆ ವಿಮಾನ ಟಿಕೆಟ್‌ ಮತ್ತು ಅಲ್ಲಿಂದ ಮಂಗಳೂರಿಗೆ ಬಸ್‌ ಟಿಕೆಟ್‌ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ವ್ಯವಸ್ಥೆ ಮಾಡಿದ್ದರು.

ಯುವಕರ ಬಿಡುಗಡೆ ವಿಚಾರದಲ್ಲಿ ತಕ್ಷಣ ಸ್ಪಂದಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರ ಕಾರ್ಯವೈಖರಿಯನ್ನು ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಸಿಬಿ ಯು. ಶ್ಲಾಘಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

14 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago