Featured

ತವರು ಸೇರಿದ ಕರಾವಳಿ ಮೂಲದ ಕುವೈತ್‌ನಲ್ಲಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರು -Vishwanews24

ಮಂಗಳೂರು,: ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು ಇಂದು ಬೆಳಗ್ಗೆ ಮರಳಿ ತವರು ಸೇರಿದ್ದಾರೆ. ಈ ಸಂತ್ರಸ್ತ ಯುವಕರನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರು ನಗರದ ಪಂಪ್ವೆಲ್ ಬಳಿ ಸ್ವಾಗತಿಸಿದ್ದಾರೆ.

ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.

ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ನ ಕುವೈತ್‌ ಶಾಖೆಯ ಸದಸ್ಯ ಮಂಜೇಶ್ವರ ಮೋಹನದಾಸ್‌ ಕಾಮತ್‌, ಅನಿವಾಸಿ ಭಾರತೀಯರಾದ ರಾಜ್‌ ಭಂಡಾರಿ, ಮಾಧವ ನಾಯಕ್, ವಿಜಯ್‌ ಫರ್ನಾಂಡಿಸ್‌ ಕುವೈತ್‌ ವಿಮಾನ ನಿಲ್ದಾಣದಲ್ಲಿ ಈ ಕಾರ್ಮಿಕರನ್ನು ಬೀಳ್ಕೊಟ್ಟಿದ್ದರು. ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ.

ಈ 19 ಮಂದಿಗೆ ಕುವೈತ್‌ನಿಂದ ಮುಂಬೈಗೆ ವಿಮಾನ ಟಿಕೆಟ್‌ ಮತ್ತು ಅಲ್ಲಿಂದ ಮಂಗಳೂರಿಗೆ ಬಸ್‌ ಟಿಕೆಟ್‌ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ವ್ಯವಸ್ಥೆ ಮಾಡಿದ್ದರು.

ಯುವಕರ ಬಿಡುಗಡೆ ವಿಚಾರದಲ್ಲಿ ತಕ್ಷಣ ಸ್ಪಂದಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರ ಕಾರ್ಯವೈಖರಿಯನ್ನು ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಸಿಬಿ ಯು. ಶ್ಲಾಘಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago