ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ : ಶಾಸಕ ಕೆ.ಎಸ್ ಬಸವಂತಪ್ಪ – vishwanews24

Featured, ರಾಜ್ಯ ನ್ಯೂಸ್

ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ  :ಶಾಸಕ ಕೆ.ಎಸ್ ಬಸವಂತಪ್ಪ

ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ.

ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದಿದ್ದಾರೆ.

ಪ್ರಯಾಗ್ ರಾಜ್: ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಪ್ರಧಾನಿ ಮೋದಿ – vishwanews24

ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್‍ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದ್ರೆ ಹೇಳಿ ಹೇಳಿದ್ದಾರೆ.

Leave a Reply