ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ.
ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ.
ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಬಳಿ ದಡಕ್ಕೆ ಅಪ್ಪಳಿಸಿತು.
ಬೋಟ್ನಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬೋಟ್ ಮತ್ತು ಅದರಲ್ಲಿದ್ದ ಇತರೆ ಸಾಮಾಗ್ರಿಗಳು ಹಾನಿಗೊಳಗಾಗಿದ್ದು, ಸುಮಾರು 10 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.
ಈ ಘಟನೆ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…