ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತಾಕತ್ತಿದ್ದರೆ ಭಜರಂಗದಳವನ್ನು ನಿಷೇಧಿಸಿ ಎಂದು ಉಡುಪಿ ಜಿಲ್ಲಾ ಭಜರಂಗ ದಳದ ಮಾಜಿ ಸಂಚಾಲಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದುತ್ವದ ವಿಚಾರಧಾರೆಯೊಂದಿಗೆ ರಾಷ್ಟ್ರ ವಿರೋಧಿಗಳಿಗೆ ಸಿಂಹ ಸ್ವಪ್ನ ಸಂಘಟನೆಯಾಗಿ, ಗೋ ಕಳ್ಳರ ಹಾಗೂ ಲವ್ ಜಿಹಾದಿಗಳ ವಿರುಧ್ದ ಕಠಿಣ ನಿಲುವು ತಾಳಿದ ದೇಶ ಭಕ್ತ ಹಿಂದೂ ಸಂಘಟನೆಯನ್ನು ದಮನಿಸುವ ಯತ್ನದ ಮೂಲಕ ರಾಜ್ಯ ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರ ಓಲೈಕೆಗೆ ಮುಂದಾಗಿದೆ.
ಈ ಹಿಂದೆ ಸದಾ ಹಿಂದೂ ವಿರೋಧಿ ನಿಲುವಿನ ಸರಕಾರ ನಡೆಸಿದ ಸಿದ್ದರಾಮಯ್ಯ ಈಗಾಗಲೇ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಹ್ತಿರದಿಂದ ಹಿಂಪಡೆಯುವ ಬಗ್ಗೆ ಹಾಗೂ ಟಿಪ್ಪು ಜಯಂತಿ ಆಚರಣೆಗೆ ಮುಂದಾಗುವ ಮೂಲಕ ಹಿಂದೂ ಸಂಘಟನೆಯ ಕಾರ್ಯಕರ್ತರ ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದಾರೆ.
ಕೇಸರಿ ಶಾಲು ಧರಿಸಿ ಮನೆ ಮನೆ ಭೇಟಿ ನೀಡಿ ನಕಲಿ ಹಿಂದುತ್ವದ ಮುಖವಾಡ ಧರಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭಜರಂಗ ದಳ ನಿಷೇಧದ ಬಗ್ಗೆ ತಮ್ಮ ನಿಲುವು ಸ್ಪಷ್ಟ ಪಡಿಸಲಿ. ಕಾಂಗ್ರೆಸ್ ಪಕ್ಷದ ಈ ಹಿಂದೂ ವಿರೋಧಿ ಮನಸ್ಥಿತಿಗೆ ಸಮಸ್ತ ಹಿಂದೂ ಸಮಾಜ ತಕ್ಕ ಉತ್ತರ ಮುಂದಿನ ಚುನಾವಣೆಯಲ್ಲಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…