Featured

ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ : ದಿನೇಶ್ ಗುಂಡೂರಾವ್ ಗೆ ಯಡಿಯೂರಪ್ಪ ಸವಾಲು -Vishwanews24

ಬೆಂಗಳೂರು,: ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡಬೇಕಾಗುತ್ತದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎಚ್ಚರಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ ಎಂಬ ಸವಾಲು ಹಾಕಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡುತ್ತೀವಿ ಎಂದು ಎಲ್ಲಿಯೂ ಹೇಳಿಲ್ಲ. ಕಳೆದ ಮೂರು ತಿಂಗಳಿನಿಂದ ಅವರು ಅದನ್ನೇ ಹೇಳುತ್ತಿದ್ದಾರೆ. ತಮ್ಮ ಗೊಂದಲ ಮುಚ್ಚಿಹಾಕಲು ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ರಿವರ್ಸ್ ಆಪರೇಷನ್ ಮಾಡುವುದಾದರೆ ಮಾಡಲಿ. ಎಂದು ಹೇಳಿದರು.

ಮುಖ್ಯಮಂತ್ರಿಯವರು ತಮ್ಮ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎನ್ನುತ್ತಿದ್ದಾರೆ. ಬೆಂಗಳೂರಿನಿಂದ ಅಮೆರಿಕ ಏನು ದೂರ ಇದೆಯೇ? ಅವರು ಅಮೆರಿಕದಿಂದ ಬರಲಿ ನೋಡೋಣ. ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಬಿಜೆಪಿಯ ಕೇಂದ್ರದ ಮುಖಂಡರು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಕಾಂಗ್ರೆಸ್ ಶಾಸಕರನ್ನು ಭಯಗೊಳಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ನಮಗೂ ಶಕ್ತಿ ಸಾಮರ್ಥ್ಯವಿದೆ, ಆದರೆ ಅದನ್ನು ಈ ವರೆಗೆ ಪ್ರಯತ್ನಿಸಿಲ್ಲ, ಇದೇ ರೀತಿ ಮುಂದುವರಿದರೆ ನಾವೂ ಅದಕ್ಕೆ (ರಿವರ್ಸ್ ಆಪರೇಷನ್) ಕೈಹಾಕಬೇಕಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago