ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್ ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಿ : ವಜ್ರದೇಹಿ ಸ್ವಾಮೀಜಿ – vishwanews24

Featured, ರಾಜ್ಯ ನ್ಯೂಸ್

ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್ ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಿ : ವಜ್ರದೇಹಿ ಸ್ವಾಮೀಜಿ

ಬೆಂಗಳೂರು: ಬಜರಂಗದಳ ಕಾರ್ಯಕರ್ತರ ಗಡಿಪಾರು ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿ ಆಕ್ರೋಶ ಹೊರ ಹಾಕಿದ್ದಾರೆ. ಸುಳ್ಯದ ಕಾರ್ಯಕ್ರಮವೊಂದರಲ್ಲಿ ಏಕವಚನದಲ್ಲಿ ವಕ್ಫ್ ಸಚಿವ ಜಮೀರ್ ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಲು ವಜ್ರದೇಹಿ ಸ್ವಾಮೀಜಿ ತಾಕೀತು ಮಾಡಿದ್ದಾರೆ.

“ಅನಾಮತ್ತಾಗಿ ಬಂದವ ವಕ್ಫ್ ಬೋರ್ಡ್ ಸಚಿವ ಜಮೀರ್. ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್ ನನ್ನ ಗಡಿಪಾರು ಮಾಡಿ. ಇಲ್ಲೆಲ್ಲೂ ಅಲ್ಲ ಜಮೀರ್ ನನ್ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ನಿಮಗೆ ತಾಕತ್ತಿದ್ಯಾ ಎಸ್ಪಿ ಸಾಹೇಬ್ರೆ .. ಎಂದು ಪೊಲೀಸ್ ಇಲಾಖೆಗೆ ಸ್ವಾಮೀಜಿ ಸವಾಲ್ ಹಾಕಿದ್ದಾರೆ. ಹಿಂದೂ ಕಾರ್ಯಕರ್ತರ ಯಾವುದಕ್ಕೋಸ್ಕರ ಕೇಸ್ ಹಾಕೊಂಡ್ರು ..? ಅವಲೋಕನ ಮಾಡಿ.

ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ವಂಚನೆಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಕೊನೆಗೂ ಬಂಧಮುಕ್ತ; ಇಂದು ಸ್ವದೇಶಕ್ಕೆ – vishwanews24

ಗೋವುಗಳನ್ನ ರಕ್ಷಣೆ ಮಾಡಿ 10-20 ಕೇಸ್ ಬಿದ್ದಿದೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನ ಗಡಿಪಾರು ಮಾಡಲಿ. ಸರಕಾರಕ್ಕೆ ನಮ್ಮ ಮಕ್ಕಳನ್ನ ಕಂಡರೆ ಭಯ. ಹಿಂದೂ ಕಾರ್ಯಕರ್ತ ಲತೇಶ್ ನನ್ನ ಗಡಿಪಾರು ಮಾಡಬಹದು. ಲತೇಶ್ ನಂತಹ ಸಾವಿರ ಯುವಕರು ಹುಟ್ಟಿದ್ರೆ ಮುಂದಿನ ದಿನಗಳು ನಿಮಗೆ ಕಷ್ಟವಾಗಬಹುದು ಎಂದು ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಗುಡುಗಿದ್ದಾರೆ.

Leave a Reply