ಬೆಂಗಳೂರು: ಬಜರಂಗದಳ ಕಾರ್ಯಕರ್ತರ ಗಡಿಪಾರು ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿ ಆಕ್ರೋಶ ಹೊರ ಹಾಕಿದ್ದಾರೆ. ಸುಳ್ಯದ ಕಾರ್ಯಕ್ರಮವೊಂದರಲ್ಲಿ ಏಕವಚನದಲ್ಲಿ ವಕ್ಫ್ ಸಚಿವ ಜಮೀರ್ ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಲು ವಜ್ರದೇಹಿ ಸ್ವಾಮೀಜಿ ತಾಕೀತು ಮಾಡಿದ್ದಾರೆ.
“ಅನಾಮತ್ತಾಗಿ ಬಂದವ ವಕ್ಫ್ ಬೋರ್ಡ್ ಸಚಿವ ಜಮೀರ್. ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್ ನನ್ನ ಗಡಿಪಾರು ಮಾಡಿ. ಇಲ್ಲೆಲ್ಲೂ ಅಲ್ಲ ಜಮೀರ್ ನನ್ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ನಿಮಗೆ ತಾಕತ್ತಿದ್ಯಾ ಎಸ್ಪಿ ಸಾಹೇಬ್ರೆ .. ಎಂದು ಪೊಲೀಸ್ ಇಲಾಖೆಗೆ ಸ್ವಾಮೀಜಿ ಸವಾಲ್ ಹಾಕಿದ್ದಾರೆ. ಹಿಂದೂ ಕಾರ್ಯಕರ್ತರ ಯಾವುದಕ್ಕೋಸ್ಕರ ಕೇಸ್ ಹಾಕೊಂಡ್ರು ..? ಅವಲೋಕನ ಮಾಡಿ.
ಗೋವುಗಳನ್ನ ರಕ್ಷಣೆ ಮಾಡಿ 10-20 ಕೇಸ್ ಬಿದ್ದಿದೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನ ಗಡಿಪಾರು ಮಾಡಲಿ. ಸರಕಾರಕ್ಕೆ ನಮ್ಮ ಮಕ್ಕಳನ್ನ ಕಂಡರೆ ಭಯ. ಹಿಂದೂ ಕಾರ್ಯಕರ್ತ ಲತೇಶ್ ನನ್ನ ಗಡಿಪಾರು ಮಾಡಬಹದು. ಲತೇಶ್ ನಂತಹ ಸಾವಿರ ಯುವಕರು ಹುಟ್ಟಿದ್ರೆ ಮುಂದಿನ ದಿನಗಳು ನಿಮಗೆ ಕಷ್ಟವಾಗಬಹುದು ಎಂದು ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಗುಡುಗಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…