ನವದೆಹಲಿ: ಐತಿಹಾಸಿಕ ತಾಜ್ಮಹಲ್ನಲ್ಲಿ ನಮಾಜ್ಗೆ ಅವಕಾಶ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನಮಾಜ್ ಗೆ ಅವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನಿರಾಕರಿಸಿರುವ ಸುಪ್ರೀಂ, ಐತಿಹಾಸಿಕ ತಾಜಮಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿದೆ. ಹಾಗಾಗಿ ಇಲ್ಲಿ ನಮಾಜ್ ಮಾಡಬೇಕೆನ್ನುವ ಯೋಚನೆಯನ್ನೇ ತಲೆಯಿಂದ ತೆಗೆದುಹಾಕಿ. ನಮಾಜ್ಗಾಗಿಯೇ ಇತರೆ ಸ್ಥಳಗಳು ಇವೆ. ಹೀಗಿರುವಾಗ ಐತಿಹಾಸಿಕ ಸ್ಮಾರಕಗಳಲ್ಲಿ ಈ ರೀತಿಯ ಕೆಲಸಗಳನ್ನು ಮಾಡುವುದನ್ನು ತಪ್ಪಿಸಬೇಕು ಎಂದು ಕೋರ್ಟ್ ಹೇಳಿದೆ.
ಪ್ರಾರ್ಥನೆ ಸಲ್ಲಿಸಲು ತಾಜ್ ಮಹಲ್ಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದ ಪೀಠ, ತಾಜ್ ಮಹಲ್ ವಿಶ್ವದ ಅದ್ಭುತ ಪ್ರದೇಶವಾಗಿದ್ದು, ಇಲ್ಲಿಗೆ ದಿನನಿತ್ಯ ಸಾವಿರಾರು ಪ್ರವಾಸಿಗರೂ ವರ್ಷಪೂರ್ತಿ ಆಗಮಿಸುತ್ತಲೇ ಇರುತ್ತಾರೆ. ಹೀಗಾಗಿ ತಾಜ್ ಮಹಲ್ ನಲ್ಲಿ ಪ್ರಾರ್ಥನೆಗೆ ಅವಕಾಶ ನೀಡುತ್ತಿಲ್ಲ. ಅವಕಾಶ ನೀಡಿದರೆ ಭದ್ರತೆಗೆ ಸಮಸ್ಯೆಯಾಗುತ್ತದೆ. ಅಲ್ಲಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ಬದಲು ಸಮೀಪವೇ ಇರುವ ಬೇರೆ ಮಸೀದಿಗಳಿಗೆ ತೆರಳಬಹುದು ಎಂದು ತನ್ನ ಆದೇಶದಲ್ಲಿ ಹೇಳಿದೆ.
ತಾಜ್ಮಹಲ್ಗೆ ಹಾನಿ ಉಂಟಾಗುತ್ತಿದ್ದು, ಹಾನಿಯನ್ನು ತಡೆಗಟ್ಟಲು ಎಎಸ್ಐ ಅಧಿಕಾರಿಗಳು ಸರಿಯಾಗಿ ತಮ್ಮ ಕೆಲಸವನ್ನು ನಿರ್ವಹಿಸಿದ್ದರೆ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ತಾಜ್ ಮಹಲ್ ಅನ್ನು ರಕ್ಷಿಸಲು ತಾವು ಕೈಗೊಳ್ಳುವ ಕ್ರಮಗಳ ಕರಡು ದಾಖಲೆ ಸಲ್ಲಿಸಲು ಉತ್ತರ ಪ್ರದೇಶ ಸರ್ಕಾರ ಮತ್ತು ಕೇಂದ್ರಕ್ಕೆ ನೋಟಿಸ್ ನೀಡಿತ್ತು
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…