Featured

ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು – vishwanews24

ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅಜ್ಜ ತನ್ನ ಜೀವಿತಾವಧಿಯಲ್ಲಿ ಸ್ವಂತವಾಗಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ತಂದೆಯ ಕೈ ಸೇರಿದರೂ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ಹೊರತೂ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ. ಈ ರೀತಿ ವಿಭಜನೆಯಾದ ಆಸ್ತಿಯಲ್ಲಿ ಪಾಲು ಕೇಳಲು ಮೊಮ್ಮಗಳಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಆದೇಶ ನೀಡಿದೆ ಅಮೆರಿಕದಲ್ಲಿ ನೆಲೆಸಿದ ಉಷಾ ಎನ್. ಸ್ವಾಮಿ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.

ಉಷಾ ಅವರು ಉಲ್ಲೇಖಿಸಿದ ಆಸ್ತಿಗಳನ್ನು ಆಕೆಯ ಅಜ್ಜ ಅಂದರೆ ತಂದೆಯ ತಂದೆ ಸ್ವಂತವಾಗಿ ಸಂಪಾದಿಸಿದ್ದರು ಎನ್ನುವುದು ದಾಖಲೆಗಳಿಂದ ತಿಳಿದು ಬಂದಿದೆ. ಈ ಆಸ್ತಿಯನ್ನು ಅವರ ತಾತಾ ಅವರ ಮಕ್ಕಳಿಗೆ ಕೌಟುಂಬಿಕ ಒಪ್ಪಂದದ ಮೂಲಕ ಆಸ್ತಿ ಹಂಚಿಕೆ ಮಾಡಿದ್ದಾರೆ. ಅಜ್ಜನ ಸ್ವಯಾರ್ಜಿತ ಆಸ್ತಿ ಭಾಗವಾಗಿ ತಂದೆಗೆ ಬಂದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ. ಆದರೆ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ತಂದೆಗೆ ತನ್ನ ಸ್ವಯಾರ್ಜಿತ ಆಸ್ತಿಯನ್ನು ಯಾರಿಗಾದರೂ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ಇರುತ್ತದೆ. ಈ ಆಸ್ತಿಗಳು ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಾಗಿದ್ದವು ಎಂಬುದನ್ನು ಸಾಬೀತುಪಡಿಸಲು ಮೇಲ್ಮನವಿದಾರರಾದ ಉಷಾ ಅವರು ಅಗತ್ಯ ಸಾಕ್ಷ್ಯಗಳನ್ನು ಒದಗಿಸಿಲ್ಲ. ತಾತನ ಸ್ವಯಂ ಸಂಪಾದಿತ ಆಸ್ತಿಗಳನ್ನು ಜಂಟಿ ಕುಟುಂಬದ ಆಸ್ತಿಗಳೆಂದು ಹೇಳಿ ತಾನು ಭಾಗ ಪಡೆಯಬಹುದು ಎಂದು ವಾದಿಸಲು ಸಾಧ್ಯವಿಲ್ಲ. ಆದ್ದರಿಂದ ಅವರಿಗೆ ಈ ಆಸ್ತಿಗಳಲ್ಲಿ ಯಾವುದೇ ಕಾನೂನಾತ್ಮಕ ಹಕ್ಕು ಇರುವುದಿಲ್ಲ ಎಂದು ನ್ಯಾಯ ಪೀಠ ತಿಳಿಸಿದೆ.

ಉಷಾ ಎನ್. ಸ್ವಾಮಿ 1979ರಲ್ಲಿ ವೈದ್ಯರಾದ ಜವರಯ್ಯ ಎನ್. ಸ್ವಾಮಿಯವರನ್ನು ಮದುವೆಯಾಗಿದ್ದು, ಪತಿಯೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದರು. ಅವರ ಗಮನಕ್ಕೆ ಬಾರದೆ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಪೋಷಕರು ಮಾರಾಟ ಮಾಡಿದ್ದಾರೆ. ತಂದೆಗೆ ಸೇರಿದ ಪಿತ್ರಾರ್ಜಿತ ಆಸ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಿ ಲಾಭ ಗಳಿಸಿದ್ದಾರೆ. ಈ ಲಾಭ ಅಂಶದ ಹಣದಲ್ಲಿ ಇತರೆ ಆಸ್ತಿಗಳನ್ನು ಗಳಿಸಿದ್ದಾರೆ. ಈ ಮೂಲ ಆಸ್ತಿಗಳು ಪೂರ್ವಜರಿಂದ ಬಂದ ಜಂಟಿ ಕುಟುಂಬದ ಆಸ್ತಿಗಳಾಗಿದ್ದು, ತಮಗೆ ಪಾಲು ಸಿಗಬೇಕು. ಈ ಎಲ್ಲಾ ಆಸ್ತಿಗಳು ಮತ್ತು ಬ್ಯಾಂಕ್ ಠೇವಣಿಯಲ್ಲಿಯೂ ತಾನು ಭಾಗ ಪಡೆಯಲು ಅಧಿಕಾರವಿದೆ. ಹೀಗಾಗಿ ಆಸ್ತಿಯಲ್ಲಿ ತನಗೆ ಭಾಗ ನೀಡಲು ನಿರ್ದೇಶನ ನೀಡಬೇಕು ಎಂದು ಅಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

16 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

17 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago