Featured

ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು – vishwanews24

ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅಜ್ಜ ತನ್ನ ಜೀವಿತಾವಧಿಯಲ್ಲಿ ಸ್ವಂತವಾಗಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ತಂದೆಯ ಕೈ ಸೇರಿದರೂ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ಹೊರತೂ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ. ಈ ರೀತಿ ವಿಭಜನೆಯಾದ ಆಸ್ತಿಯಲ್ಲಿ ಪಾಲು ಕೇಳಲು ಮೊಮ್ಮಗಳಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಆದೇಶ ನೀಡಿದೆ ಅಮೆರಿಕದಲ್ಲಿ ನೆಲೆಸಿದ ಉಷಾ ಎನ್. ಸ್ವಾಮಿ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.

ಉಷಾ ಅವರು ಉಲ್ಲೇಖಿಸಿದ ಆಸ್ತಿಗಳನ್ನು ಆಕೆಯ ಅಜ್ಜ ಅಂದರೆ ತಂದೆಯ ತಂದೆ ಸ್ವಂತವಾಗಿ ಸಂಪಾದಿಸಿದ್ದರು ಎನ್ನುವುದು ದಾಖಲೆಗಳಿಂದ ತಿಳಿದು ಬಂದಿದೆ. ಈ ಆಸ್ತಿಯನ್ನು ಅವರ ತಾತಾ ಅವರ ಮಕ್ಕಳಿಗೆ ಕೌಟುಂಬಿಕ ಒಪ್ಪಂದದ ಮೂಲಕ ಆಸ್ತಿ ಹಂಚಿಕೆ ಮಾಡಿದ್ದಾರೆ. ಅಜ್ಜನ ಸ್ವಯಾರ್ಜಿತ ಆಸ್ತಿ ಭಾಗವಾಗಿ ತಂದೆಗೆ ಬಂದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ. ಆದರೆ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ತಂದೆಗೆ ತನ್ನ ಸ್ವಯಾರ್ಜಿತ ಆಸ್ತಿಯನ್ನು ಯಾರಿಗಾದರೂ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ಇರುತ್ತದೆ. ಈ ಆಸ್ತಿಗಳು ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಾಗಿದ್ದವು ಎಂಬುದನ್ನು ಸಾಬೀತುಪಡಿಸಲು ಮೇಲ್ಮನವಿದಾರರಾದ ಉಷಾ ಅವರು ಅಗತ್ಯ ಸಾಕ್ಷ್ಯಗಳನ್ನು ಒದಗಿಸಿಲ್ಲ. ತಾತನ ಸ್ವಯಂ ಸಂಪಾದಿತ ಆಸ್ತಿಗಳನ್ನು ಜಂಟಿ ಕುಟುಂಬದ ಆಸ್ತಿಗಳೆಂದು ಹೇಳಿ ತಾನು ಭಾಗ ಪಡೆಯಬಹುದು ಎಂದು ವಾದಿಸಲು ಸಾಧ್ಯವಿಲ್ಲ. ಆದ್ದರಿಂದ ಅವರಿಗೆ ಈ ಆಸ್ತಿಗಳಲ್ಲಿ ಯಾವುದೇ ಕಾನೂನಾತ್ಮಕ ಹಕ್ಕು ಇರುವುದಿಲ್ಲ ಎಂದು ನ್ಯಾಯ ಪೀಠ ತಿಳಿಸಿದೆ.

ಉಷಾ ಎನ್. ಸ್ವಾಮಿ 1979ರಲ್ಲಿ ವೈದ್ಯರಾದ ಜವರಯ್ಯ ಎನ್. ಸ್ವಾಮಿಯವರನ್ನು ಮದುವೆಯಾಗಿದ್ದು, ಪತಿಯೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದರು. ಅವರ ಗಮನಕ್ಕೆ ಬಾರದೆ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಪೋಷಕರು ಮಾರಾಟ ಮಾಡಿದ್ದಾರೆ. ತಂದೆಗೆ ಸೇರಿದ ಪಿತ್ರಾರ್ಜಿತ ಆಸ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಿ ಲಾಭ ಗಳಿಸಿದ್ದಾರೆ. ಈ ಲಾಭ ಅಂಶದ ಹಣದಲ್ಲಿ ಇತರೆ ಆಸ್ತಿಗಳನ್ನು ಗಳಿಸಿದ್ದಾರೆ. ಈ ಮೂಲ ಆಸ್ತಿಗಳು ಪೂರ್ವಜರಿಂದ ಬಂದ ಜಂಟಿ ಕುಟುಂಬದ ಆಸ್ತಿಗಳಾಗಿದ್ದು, ತಮಗೆ ಪಾಲು ಸಿಗಬೇಕು. ಈ ಎಲ್ಲಾ ಆಸ್ತಿಗಳು ಮತ್ತು ಬ್ಯಾಂಕ್ ಠೇವಣಿಯಲ್ಲಿಯೂ ತಾನು ಭಾಗ ಪಡೆಯಲು ಅಧಿಕಾರವಿದೆ. ಹೀಗಾಗಿ ಆಸ್ತಿಯಲ್ಲಿ ತನಗೆ ಭಾಗ ನೀಡಲು ನಿರ್ದೇಶನ ನೀಡಬೇಕು ಎಂದು ಅಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

 

Vishwa News 24

Recent Posts

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

42 minutes ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

1 hour ago

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…

2 hours ago

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

2 hours ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

3 hours ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

3 hours ago