ಬೆಂಗಳೂರು: ಅಜ್ಜ ತನ್ನ ಜೀವಿತಾವಧಿಯಲ್ಲಿ ಸ್ವಂತವಾಗಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ತಂದೆಯ ಕೈ ಸೇರಿದರೂ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ಹೊರತೂ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ. ಈ ರೀತಿ ವಿಭಜನೆಯಾದ ಆಸ್ತಿಯಲ್ಲಿ ಪಾಲು ಕೇಳಲು ಮೊಮ್ಮಗಳಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಆದೇಶ ನೀಡಿದೆ ಅಮೆರಿಕದಲ್ಲಿ ನೆಲೆಸಿದ ಉಷಾ ಎನ್. ಸ್ವಾಮಿ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.
ಉಷಾ ಅವರು ಉಲ್ಲೇಖಿಸಿದ ಆಸ್ತಿಗಳನ್ನು ಆಕೆಯ ಅಜ್ಜ ಅಂದರೆ ತಂದೆಯ ತಂದೆ ಸ್ವಂತವಾಗಿ ಸಂಪಾದಿಸಿದ್ದರು ಎನ್ನುವುದು ದಾಖಲೆಗಳಿಂದ ತಿಳಿದು ಬಂದಿದೆ. ಈ ಆಸ್ತಿಯನ್ನು ಅವರ ತಾತಾ ಅವರ ಮಕ್ಕಳಿಗೆ ಕೌಟುಂಬಿಕ ಒಪ್ಪಂದದ ಮೂಲಕ ಆಸ್ತಿ ಹಂಚಿಕೆ ಮಾಡಿದ್ದಾರೆ. ಅಜ್ಜನ ಸ್ವಯಾರ್ಜಿತ ಆಸ್ತಿ ಭಾಗವಾಗಿ ತಂದೆಗೆ ಬಂದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ. ಆದರೆ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ತಂದೆಗೆ ತನ್ನ ಸ್ವಯಾರ್ಜಿತ ಆಸ್ತಿಯನ್ನು ಯಾರಿಗಾದರೂ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ಇರುತ್ತದೆ. ಈ ಆಸ್ತಿಗಳು ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಾಗಿದ್ದವು ಎಂಬುದನ್ನು ಸಾಬೀತುಪಡಿಸಲು ಮೇಲ್ಮನವಿದಾರರಾದ ಉಷಾ ಅವರು ಅಗತ್ಯ ಸಾಕ್ಷ್ಯಗಳನ್ನು ಒದಗಿಸಿಲ್ಲ. ತಾತನ ಸ್ವಯಂ ಸಂಪಾದಿತ ಆಸ್ತಿಗಳನ್ನು ಜಂಟಿ ಕುಟುಂಬದ ಆಸ್ತಿಗಳೆಂದು ಹೇಳಿ ತಾನು ಭಾಗ ಪಡೆಯಬಹುದು ಎಂದು ವಾದಿಸಲು ಸಾಧ್ಯವಿಲ್ಲ. ಆದ್ದರಿಂದ ಅವರಿಗೆ ಈ ಆಸ್ತಿಗಳಲ್ಲಿ ಯಾವುದೇ ಕಾನೂನಾತ್ಮಕ ಹಕ್ಕು ಇರುವುದಿಲ್ಲ ಎಂದು ನ್ಯಾಯ ಪೀಠ ತಿಳಿಸಿದೆ.
ಉಷಾ ಎನ್. ಸ್ವಾಮಿ 1979ರಲ್ಲಿ ವೈದ್ಯರಾದ ಜವರಯ್ಯ ಎನ್. ಸ್ವಾಮಿಯವರನ್ನು ಮದುವೆಯಾಗಿದ್ದು, ಪತಿಯೊಂದಿಗೆ ಅಮೆರಿಕದಲ್ಲಿ ವಾಸಿಸುತ್ತಿದ್ದರು. ಅವರ ಗಮನಕ್ಕೆ ಬಾರದೆ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಪೋಷಕರು ಮಾರಾಟ ಮಾಡಿದ್ದಾರೆ. ತಂದೆಗೆ ಸೇರಿದ ಪಿತ್ರಾರ್ಜಿತ ಆಸ್ತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಿ ಲಾಭ ಗಳಿಸಿದ್ದಾರೆ. ಈ ಲಾಭ ಅಂಶದ ಹಣದಲ್ಲಿ ಇತರೆ ಆಸ್ತಿಗಳನ್ನು ಗಳಿಸಿದ್ದಾರೆ. ಈ ಮೂಲ ಆಸ್ತಿಗಳು ಪೂರ್ವಜರಿಂದ ಬಂದ ಜಂಟಿ ಕುಟುಂಬದ ಆಸ್ತಿಗಳಾಗಿದ್ದು, ತಮಗೆ ಪಾಲು ಸಿಗಬೇಕು. ಈ ಎಲ್ಲಾ ಆಸ್ತಿಗಳು ಮತ್ತು ಬ್ಯಾಂಕ್ ಠೇವಣಿಯಲ್ಲಿಯೂ ತಾನು ಭಾಗ ಪಡೆಯಲು ಅಧಿಕಾರವಿದೆ. ಹೀಗಾಗಿ ಆಸ್ತಿಯಲ್ಲಿ ತನಗೆ ಭಾಗ ನೀಡಲು ನಿರ್ದೇಶನ ನೀಡಬೇಕು ಎಂದು ಅಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…
ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…
ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? : ಹೆಚ್ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…