Featured

ತಾನು ವಾಸಿಸುವ ಮನೆ ಬಿಟ್ಟರೆ ಪ್ರಧಾನಿ ಬಳಿ ಬೇರೆ ಯಾವುದೇ ಆಸ್ತಿಗಳಿಲ್ಲ.. ಬಹಿರಂಗವಾಯಿತು ಮೋದಿ ಆಸ್ತಿ ವಿವರ…!!

ನವದಹಲಿ: ಪ್ರಧಾನಿ ನರೇಂದ್ರ ಮೋದಿ ಎರಡು ಕೋಟಿ ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತಿ ಹೊಂದಿದ್ದು, ಮನೆಯೊಂದನ್ನು ಬಿಟ್ಟು, ಕಾರು, ಬೈಕ್ ಸೇರಿದಂತೆ ಯಾವುದೇ ಚರಾಸ್ತಿಯನ್ನು ಹೊಂದಿಲ್ಲ.

ನರೇಂದ್ರ ಮೋದಿ ಅವರ ವಾರ್ಷಿಕ ಆಸ್ತಿ ವಿವರವನ್ನು ಪ್ರಧಾನಿ ಕಾರ್ಯಾಲಯ ಸ್ವಯಂ ಪ್ರೇರಣೆಯಿಂದ ಪ್ರಕಟಿಸಿದ್ದು, ಇದರಲ್ಲಿ 2018ರ ಮಾರ್ಚ್ 31ರ ವರೆಗಿನ ಮಾಹಿತಿಯನ್ನು ನೀಡಿದೆ.

48,944 ರೂ. ನಗದು, ಗುಜರಾತ್‍ನ ಗಾಂಧಿನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಖಾತೆಯಲ್ಲಿ 11,29,690 ರೂ. ಹಾಗೂ ಮತ್ತೊಂದು ಖಾತೆಯಲ್ಲಿ 1,09,96,288 ರೂ. ಠೇವಣಿ ಹೊಂದಿದ್ದಾರೆ ಎಂದು ತಿಳಿಸಲಾಗಿದೆ.

ಗಾಂಧಿನಗರಲ್ಲಿ ಮೋದಿ ಅವರು 2002ರಲ್ಲಿ ನಾಲ್ಕನೇ ಒಂದರಷ್ಟು ಷೇರು (1.30 ಲಕ್ಷ ರೂ.) ನೀಡಿ, ವಸತಿ ಕಟ್ಟಡವೊಂದನ್ನು ಖರೀದಿಸಿದ್ದರು. ಅದರ ಬೆಲೆ ಈಗ ಒಂದು ಕೋಟಿ ರೂ. ಮೌಲ್ಯ ಎಂದು ಅಂದಾಜಿಸಲಾಗಿದೆ.

ಮೋದಿ ಅವರು ಚರಾಸ್ತಿಯಾಗಿ ಮನೆಯನ್ನು ಮಾತ್ರ ಹೊಂದಿದ್ದಾರೆ. ಉಳಿದಂತೆ ಅವರ ಬಳಿ ಯಾವುದೇ ಸ್ವಂತ ಕಾರು, ಬೈಕ್ ಸೇರಿದಂತೆ ಯಾವುದೇ ವಾಹನಗಳು ಕೂಡಾ ಇಲ್ಲ ಎಂದು ಉಲ್ಲೇಖಿಸಲಾಗಿದೆ.

ನಾಲ್ಕು ಚಿನ್ನದ ಉಂಗುರಗಳಿದ್ದು, ಅವುಗಳ ಮೌಲ್ಯ 1,38,060 ರೂ. ಆಗಿದೆ. ಎಲ್ ಅಂಡ್ ಟಿ ಇನ್‍ಫ್ರಾಸ್ಟ್ರಕ್ಚರ್ ನಲ್ಲಿ ಸದ್ಯ 20,000 ರೂ. ಮೌಲ್ಯದ ಹೂಡಿಕೆ ಹಾಗೂ ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್ ಅಡಿ 5,18,235 ರೂ. ಹೂಡಿಕೆ ಮಾಡಿದ್ದಾರೆ. ಇದರ ಜೊತೆಗೆ 1,59,281 ರೂ. ಮೌಲ್ಯದ ಎಲ್‍ಐಸಿ ಪಾಲಿಸಿಯನ್ನು ಮೋದಿ ಹೊಂದಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago