Featured

ತಾಯಿಯ ಪಾದದಡಿ ಕಣ್ಣೀರಿಟ್ಟ ಭೂಗತ ಪಾತಕಿ!

ಉಡುಪಿ:  ಭೂಗತ ಪಾತಕಿ ಬನ್ನಂಜೆ ರಾಜ ಸುಮಾರು 25 ವರ್ಷಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದನು. 2015ರಲ್ಲಿ ಮೊರಕ್ಕೋದಲ್ಲಿ ಪೊಲೀಸರಿಗೆ ಶರಣಾಗಿದ್ದ. 2015ರ ಆಗಸ್ಟ್ 15ರಂದು ಉಡುಪಿಗೆ ಕರೆತರಲಾಗಿತ್ತು. 10ಕ್ಕೂ ಹೆಚ್ಚು ಪ್ರಕರಣಗಳು ಸದ್ಯ ಬನ್ನಂಜೆ ರಾಜನ ಮೇಲಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ಸುಮಾರು 25 ವರ್ಷಗಳಿಂದ ಕುಟುಂಬದ ಸಂಪರ್ಕದಿಂದ ದೂರವಾಗಿದ್ದ ರಾಜನಿಗೆ ಅಮ್ಮನ ಅನಾರೋಗ್ಯ ಬಹಳ ಕಾಡುತ್ತಿದ್ದಂತೆ. ಅಮ್ಮನ ಕೊನೆಯ ದಿನಗಳಲ್ಲಿ ಅವರ ಜೊತೆಗೆ ಇರಬೇಕು ಅಂತ ಅವನ ಮನಸ್ಸು ಹಂಬಲಿಸಿದೆ. ಹೀಗಾಗಿ ಪೊಲೀಸರಿಗೆ ಶರಣಾಗಿದ್ದಾನೆ.

ತಾಯಿಯ ಅನಾರೋಗ್ಯದ ಸಂದರ್ಭ ಮನೆಗೆ ಬಂದಿದ್ದ ಬನ್ನಂಜೆ, ಎರಡನೇ ಭೇಟಿಯ ಸಂದರ್ಭ ತಾಯಿ ಇಲ್ಲವಾಗಿದ್ದಾರೆ. ಅಂತ್ಯ ಸಂಸ್ಥಾರದ ಚಿತೆಯ ಮೇಲೆ ಮಲಗಿದ್ದ ತಾಯಿಯ ಪಾದದ ಕೆಳಗೆ ತಲೆಯಿಟ್ಟು ಕೆಲಕಾಲ ಕಣ್ಣೀರಿಟ್ಟಿದ್ದಾನೆ. ಬನ್ನಂಜೆ ರಾಜಾ, ತಂದೆ ಮತ್ತು ಅಣ್ಣನ ಜೊತೆಗೆ ತಾಯಿಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಿದ್ದಾನೆ. ಪ್ರಕ್ರಿಯೆಗಳೆಲ್ಲಾ ಮುಗಿಯುವ ತನಕ ಸ್ಮಶಾನದಲ್ಲಿರಲು ಅವಕಾಶ ನೀಡಿದ ಪೊಲೀಸರು ಮತ್ತೆ ನಗರ ಠಾಣೆಗೆ ಕರೆದೊಯ್ದಿದ್ದಾರೆ.

ಬನ್ನಂಜೆ ರಾಜನ ಸಂಬಂಧಿ ಸುನೀಲ್ ದಾಸ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ವಿಲಾಸಿನಿ ಶೆಟ್ಟಿಗಾರ್ ಉತ್ತಮ ಶಿಕ್ಷಕಿಯಾಗಿ ಉಡುಪಿಯ ಎಲ್ಲಾ ಭಾಗಗಳಲ್ಲೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದರು. ಕಾಲು ಜಾರಿ ಬಿದ್ದು ಮೃತಪಟ್ಟಿದ್ದು, ಬನ್ನಂಜೆ ರಾಜನನ್ನು ಬೆಳಗಾವಿಯಿಂದ ಕರೆತರಲು ಉಡುಪಿ ಕೋರ್ಟ್ ಅವಕಾಶ ನೀಡಿದೆ. ಇಡೀ ಕುಟುಂಬಸ್ಥರ ಪರವಾಗಿ ನಾವು ಕೋರ್ಟ್ ಮತ್ತು ಪೊಲೀಸ್ ಇಲಾಖೆಗೆ ಧನ್ಯವಾದ ಹೇಳುತ್ತೇವೆ. ತಾಯಿಯ ಕೊನೆಗಾಲದಲ್ಲಿ ಜೊತೆಗಿರಬೇಕು ಎಂದು ರಾಜೇಂದ್ರ (ಬನ್ನಂಜೆ ರಾಜ) ಹೇಳಿಕೊಂಡಿದ್ದನು. ಆದರೆ ತಾಯಿಯ ಮುಖವನ್ನಾದರೂ ನೋಡುವ ಅವಕಾಶ ಸಿಕ್ಕಿದ್ದು ನೆಮ್ಮದಿ ತಂದಿದೆ ಎಂದು ಹೇಳಿದರು.

ಭೂಗತ ಪಾತಕಿ ಬನ್ನಂಜೆ ರಾಜನ ತಾಯಿ ವಿಲಾಸಿನಿ ಶೆಟ್ಟಿಗಾರ್ ಕಾಲು ಜಾರಿ ಬಿದ್ದು ಮೃತಪಟ್ಟಿದ್ದು, ಇಂದು ಅಂತ್ಯಸಂಸ್ಕಾರ ನಡೆದಿದೆ. ಬನ್ನಂಜೆ ರಾಜ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ತಾಯಿಯ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾನೆ.

ಉಡುಪಿಯ ಕಲ್ಮಾಡಿಯಲ್ಲಿರುವ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದ ವಿಲಾಸಿನಿ ಶೆಟ್ಟಿಗಾರ್ಗೆ ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಬಳಿಕ ಬನ್ನಂಜೆ ರಾಜಾ ಕುಟುಂಬಸ್ಥರು ಉಡುಪಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದು, ರಾಜನನ್ನು ಒಂದು ದಿನದ ಮಟ್ಟಿಗೆ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಪರವಾನಿಗೆ ಪಡೆಯುವುದರಲ್ಲಿ ಯಶಸ್ವಿಯಾದರು.

 

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

4 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

7 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

7 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

7 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

7 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

8 hours ago