Featured

ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ : ಯಾವುದೇ ಸೀಲ್ ಡೌನ್ ‌ ಮಾಡಿಲ್ಲ: ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ : ಯಾವುದೇ ಸೀಲ್ ಡೌನ್ ‌ ಮಾಡಿಲ್ಲ: ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ಬೆಂಗಳೂರು : ಬ್ರಿಟನ್ ನಿಂದ ಬಂದಿದ್ದಂತ ನಗರದ ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಿಂದಾಗಿ ಅವರು ವಾಸವಾಗಿರುವಂತ ವಸಂತ ನಗರದ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತಿದೆ ಎನ್ನಲಾಗಿತ್ತು. ಆದ್ರೇ ಅಪಾರ್ಟ್ಮೆಂಟ್ ನಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡಿದ್ದೇವೆಯೇ ಹೊರತು, ಯಾವುದೇ ಸೀಲ್ ಡೌನ್ ಮಾಡಿಲ್ಲ ಎಂಬುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ, ನಗರದಲ್ಲಿ ಸೋಂಕು ದೃಢಪಟ್ಟ ಸಂಪರ್ಕಿತರಾಗಿದ್ದಂತವರನ್ನು ಐಸೋಲೇಷನ್ ಮಾಡಲಾಗಿದೆ. ಸೋಂಕಿತ ಪ್ರದೇಶದಲ್ಲಿ ಕೋವಿಡ್ ಸೋಂಕು ಮಾರ್ಗಸೂಚಿ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಇದರ ಹೊರತಾಗಿ ಸೀಲ್ ಡೌನ್ ಆಗಲಿ, ಲಾಕ್ ಡೌನ್ ಆಗಲಿ ಮಾಡುವಂತೆ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ವಸಂತ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದಂತ ತಾಯಿ ಮಗಳು ಬ್ರಿಟನ್ ನಿಂದ ಹಿಂದಿರುಗಿದ್ದರು. ಇಂತಹ ತಾಯಿ ಮಗಳಿಗೆ ಬ್ರಿಟನ್ ವೈರಸ್ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಅವರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿ ಐಸೋಲೇಷನ್ ಮಾಡಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ತಾಯಿ-ಮಗಳು ವಾಸವಿದ್ದಂತ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದೀಗ ಬಿಬಿಎಂಪಿ ಆರೋಗ್ಯಾಧಿಕಾರಿ ಸೀಲ್ ಡೌನ್ ಇಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

18 hours ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

19 hours ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

21 hours ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

21 hours ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

21 hours ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

22 hours ago