ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪಾಲಿಕೆಗೆ ಸೇರಿಸಲು ಉದ್ದೇಶಿಸಿರುವ 9 ಗ್ರಾಮ ಪಂಚಾಯತ್ ಗಳನ್ನು ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕೈಬಿಡುವಂತೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲಾಡಳಿತ ಮಹಾನಗರ ಪಾಲಿಕೆ ರಚನೆ ಬಗ್ಗೆ ಪ್ರಸ್ತಾವನೆ ಸಲ್ಲಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಅಂಕಿ ಸಂಖ್ಯೆಗಳ ಸಂಗ್ರಹಣೆ, ಜನಾಭಿಪ್ರಾಯ ಮತ್ತು ಸ್ಥಳೀಯ ಆಡಳಿತಗಳ ನಿರ್ಣಯ ಕೈಗೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ಈಗಾಗಲೇ ಅವಧಿ ಪೂರ್ಣಗೊಂಡಿರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಮುಂಬರುವ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಸಲು ನಿರ್ಧರಿಸಿರುವುದಾಗಿ ತಿಳಿದು ಬಂದಿರುತ್ತದೆ. ಸದ್ರಿ ಚುನಾವಣೆ ಘೋಷಣೆ ಸಂದರ್ಭದಲ್ಲಿ ಪ್ರಸ್ತುತ ಉದ್ದೇಶಿತ ಉಡುಪಿ ಮಹಾನಗರ ಪಾಲಿಕೆಗೆ ಸೇರಿಸಲು ಹೊರಟಿರುವ ಗ್ರಾಮ ಪಂಚಾಯತಿಗಳನ್ನು ಕೈ ಬಿಡುವ ಅಗತ್ಯವಿದೆ.
ಉಡುಪಿ ನಗರಸಭೆಯ ಅವಧಿಯು ಇನ್ನು 8 ತಿಂಗಳುಗಳಲ್ಲಿ ಮುಕ್ತಾಯಗೊಳ್ಳಲಿದೆ. ಇದರಿಂದಾಗಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಅನಗತ್ಯ ವೆಚ್ಚವನ್ನು ತಡೆಯಬಹುದಾಗಿದೆ.
ಆದುದರಿಂದ, ಉಡುಪಿ ತಾಲೂಕಿನ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ 9 ಗ್ರಾಮ ಪಂಚಾಯತ್ ಗಳಾದ ಅಲೆವೂರು, ಉದ್ಯಾವರ, ಕಡೆಕಾರ್, ಅಂಬಲಪಾಡಿ, ತೆಂಕನಿಡಿಯೂರು, ಬಡನಿಡಿಯೂರು, ಕೆಮ್ಮಣ್ಣು, ಕಲ್ಯಾಣಪುರ, 80 ಬಡಗ ಬೆಟ್ಟು ಗ್ರಾಮ ಪಂಚಾಯತಿಗಳ ವ್ಯಾಪ್ತಿಯನ್ನು ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಹೊರತು ಪಡಿಸಿ ಚುನಾವಣೆ ನಡೆಸುವಂತೆ ಶಾಸಕರು ಮನವಿ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…