ಬೆಂಗಳೂರು: ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ ಮಾಡುವ ಆಹಾರಗಳನ್ನು ಸೇವಿಸಿದರೆ ಅವುಗಳಿ0ದ ಅನಾರೋಗ್ಯಕ್ಕೆ ತುತ್ತಾಗುವುದು ಖಂಡಿತ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಬೆಂಗಳೂರಿನಾದ್ಯಂತ ಕಾರ್ಯಾಚರಣೆ ಕೈಗೊಂಡು ಇಂತಹ ಅಪಾಯಕಾರು ವಸ್ತುಗಳನ್ನು ಪತ್ತೆಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
ಇದೀಗ ಕೇರಳದಿಂದ ಆಮದಾಗಿ 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆಯಾಗಿದೆ. ದೀಪಾವಳಿ ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಎಲ್ಲಾ ಪದಾರ್ಥಗಳ ಉತ್ಪಾದನಾ ಘಟಕಗಳ ಮೇಲೆ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.ಹೊರ ರಾಜ್ಯದಿಂದ ಆಮದಾಗುವ ಆಹಾರ ಪದಾರ್ಥಗಳ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಪರೀಕ್ಷೆ ನಡೆಸಿದ್ದು, ಕೇರಳದಿಇಂದ ಆಮದಾಗುವ ಖಾರಾ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ರಸ್ಕ್, ಡ್ರೈಫ್ರೂಟ್ಸ್ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ಇಲಾಖೆ ತಿಳಿಸಿದೆ.
ಈ ತಿಂಡಿಗಳಲ್ಲ್ alura red, carmoisiine,tartrazine, sunset yellow ಸೇರಿದಂತೆ ವಿವಿಇಧ ಕೃತ ಬಣ್ಣ ಬಳಸಿರುವುದು ಪತ್ತೆಯಾಗಿದೆ. ಇವುಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ.
ಕೆಲ ದಿನಗಳ ಹಿಂದೆ ಆರೋಗ್ಯ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಬೀದಿ ಬದಿ ಮಾರಾಟ ಮಾಡುವ ಗೋಬಿ ಮಂಚೂರಿ, ಪಾನಿಪುರಿ ಸೇರಿದಂತೆ ಅನೇಕ ತಿನಿಸುಗಳಲ್ಲಿ ಬಳಸುವ ಮಸಾಲೆ ಪದಾರ್ಥಗಳಲ್ಲಿ ಹಾನಿಕಾರಕ ಅಂಶಗಳಿವೆ ಎಂದು ತಿಳಿಸಿತ್ತು. ಇದೀಗ ತಿಂಡಿ ಪ್ರಿಯರಿಗೆ ಪ್ರಿಯವಾಗಿರುವ ಕುರುಕು-ಮುರುಕು, ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣ ಬಳಕೆ ಪತ್ತೆಯಾಗಿರುವುದು ಆತಂಕ ತಂದಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…