Featured

ತಿಮರೋಡಿ ಬಂಧನ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

ತಿಮರೋಡಿ ಬಂಧನ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ಅಗೋಸ್ಟ್ 21 ರ ಮಧ್ಯಾಹ್ನ 1 ಗಂಟೆಯಿಂದ ಅಗೋಸ್ತ್ 22 ರ ಮಧ್ಯಾಹ್ನ 1 ಗಂಟೆಯ ತನಕ ನಿಷೇಧಾಜ್ಷೆಯನ್ನು ಜಾರಿಗೆಗೊಳಿಸಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಆದೇಶ ಹೊರಡಿಸಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಕ್ಕೆ ಸಂಬಂಧಿಸಿದಂತೆ ಆರೋಪಿತ ಶ್ರೀ ಮಹೇಶ್ ಶೆಟ್ಟಿ ತಿಮ್ಮರೋಡಿ ಇವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರಲಾಗಿದೆ, ಸದ್ರಿಯವರು ಸಕ್ರೀಯ ಹಿಂದೂ ಕಾರ್ಯಕರ್ತರಾಗಿದ್ದು, ಸೌಜನ್ಯ ವರ . ಹೋರಾಟಗಾರರಾಗಿದ್ದು, ಸದ್ರಿಯವರನ್ನು ಬ್ರಹ್ಮಾವರ ಠಾಣೆಗೆ ತನಿಖೆ ಬಗ್ಗೆ ಕರೆ ತಂದಾಗ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಹೊರಡಿಸುವ ಆವಶ್ಯಕತೆ ಇರುವುದರಿಂದ ದಿನಾಂಕ: 21/08/2025 ರಂದು ಅಪರಾಹ್ನ 01:00 ಗಂಟೆಯಿಂದ ದಿನಾಂಕ:22/08/2025ರ ಅಪರಾಹ್ನ, 01:00 ಗಂಟೆಯವರೆಗೆ ನಿಷೇಧಾಜ್ಞೆ ಆದೇಶವನ್ನು ಹೊರಡಿಸುವಂತೆ ಕೋರಿ ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ ಇವರು ಉಲ್ಲೇಖದಂತೆ ವರದಿಯನ್ನು ಸಲ್ಲಿಸಿರುತ್ತಾರೆ.

ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿರುತ್ತದೆ. ಈ ಹಿನ್ನಲೆಯಲ್ಲಿಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರ ವರದಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಸ್ವರೂಪ .ಟಿ.ಕೆ.ಭಾ ಆ ಸೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ ಉಡುಪಿ ಆದ ನಾನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ಪದತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

3 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

6 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

6 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

6 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

6 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

6 hours ago