Featured

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ  – vishwanews24

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ

ತಿರುಮಲ: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಕಾಲ್ತುಳಿತದದಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ಟೋಕನ್ ವಿತರಣೆಗೆ ಟಿಟಿಡಿ ವ್ಯವಸ್ಥೆ ಮಾಡಿದೆ. ಆದರೆ, ನಿನ್ನೆ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ಕಾಲ್ತುಳಿತ ಸಂಭವಿಸಿದೆ.

ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಯಿತು. ಈ ಸಂದರ್ಭ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ನುಗ್ಗಿದ್ದಾರೆ. ಹೀಗಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ಕಾಲ್ತುಳಿತದಲ್ಲಿ ಗಾಯಗೊಂಡವರ ಸಂಖ್ಯೆ ಏರಿಕೆಯಾಗುವ ನಿರೀಕ್ಷೆ ಇದೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು, ಟೋಕನ್ ಪಡೆಯಲು ಬಂದಿದ್ದ ಭಕ್ತರು ಪ್ರಾಣ ಕಳೆದುಕೊಂಡಿರುವುದು ತೀವ್ರ ಬೇಸರ ತಂದಿದೆ ಎಂದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

16 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

17 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

20 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

20 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

20 hours ago