Featured

ತಿರುಪತಿ ತಿರುಮಲ ದೇವಸ್ಥಾನಕ್ಕೆ  1 ಕೋಟಿ ರೂ. ದೇಣಿಗೆ  ನೀಡಿದ ಚೆನ್ನೈ ಮೂಲದ ಮುಸ್ಲಿಂ ದಂಪತಿ -Vishwanews24

ತಿರುಪತಿ ತಿರುಮಲ ದೇವಸ್ಥಾನಕ್ಕೆ  1 ಕೋಟಿ ರೂ. ದೇಣಿಗೆ  ನೀಡಿದ ಚೆನ್ನೈ ಮೂಲದ ಮುಸ್ಲಿಂ ದಂಪತಿ -Vishwanews24

ಚೆನ್ನೈ: ತಿರುಪತಿ ತಿರುಮಲ ದೇವಸ್ಥಾನಕ್ಕೆ  ಚೆನ್ನೈ  ಮೂಲದ ಮುಸ್ಲಿಂ ದಂಪತಿ 1 ಕೋಟಿ ರೂ. ದೇಣಿಗೆಯನ್ನು  ನೀಡಿದ್ದಾರೆ.

ಚೆನ್ನೈ ಮೂಲದ ಮುಸ್ಲಿಂ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ಈ ದೇಣಿಗೆಯನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ  ದೇವಸ್ಥಾನಂ (ಟಿಟಿಡಿ)ಗೆ ನೀಡಿದರು. ಈ ಹಣದಲ್ಲಿ ನೂತನವಾಗಿ ನಿರ್ಮಾಣವಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳು ಮತ್ತು ಪಾತ್ರೆಗಳು ಮತ್ತು ಎಸ್‍ವಿ ಅನ್ನ ಪ್ರಸಾದ ಟ್ರಸ್ಟ್‌ಗೆ 15 ಲಕ್ಷ ರೂ. ನೀಡಿರುವುದು ಸೇರಿವೆ.

ಅಬ್ದುಲ್ ಘನಿ ದೇವಸ್ಥಾನಕ್ಕೆ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಕೊರೊನಾ ಸಮಯದಲ್ಲಿ ದೇವಾಲಯದ ಆವರಣದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸಲು ಬಹು ಆಯಾಮದ ಟ್ರಾಕ್ಟರ್-ಮೌಂಟೆಡ್ ಸ್ಪ್ರೇಯರ್ ಅನ್ನು ದೇಣಿಗೆ ನೀಡಿದರು. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತರಕಾರಿ ಸಾಗಿಸಲು ರೂ.35 ಲಕ್ಷದ ರೆಫ್ರಿಜರೇಟರ್ ಟ್ರಕ್ ಅನ್ನು ಕೊಡುಗೆಯಾಗಿ ನೀಡಿದ್ದರು.

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

16 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

16 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

17 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

17 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

18 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

19 hours ago