Featured

ತಿರುಪತಿ ದೇವರ ನಾಮ ಸೆಕ್ಸ್ ಸಂಕೇತ ಎಂದವನಿಗೆ ಚಾಟಿ ಬೀಸಿದ ಹೈಕೋರ್ಟ್, ಏನಿದು ವರದಿ ಓದಿ ಇಲ್ಲಿ.

ಬೆಂಗಳೂರು :ವೆಂಕಟೇಶ್ವರ ದೇವರ ಹಣೆ ಮೇಲಿನ ಮೂರು ನಾಮವು ಸೆಕ್ಸ್ ಸಂಕೇತ ಎಂಬ ವಿವಾದಿತ ಹೇಳಿಕೆ ನೀಡಿದ್ದ ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿಯನ್ನು ಬಂಧಿಸಲು ವಿಳಂಬ ಮಾಡಿದ ಯಶವಂತಪುರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್‌ಗೆ ಹೈಕೋರ್ಟ್ ಮಂಗಳವಾರ ಚಾಟಿ ಬೀಸಿದೆ.

ಪ್ರಕರಣ ಸಂಬಂಧ ದೂರು ದಾಖಲಿಸಿದರೂ ಯಶವಂತಪು ರ ಠಾಣಾ ಪೊಲೀಸರು ನರಸಿಂಹಮೂರ್ತಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿ ಬಿ.ಎಂ.ಸುರೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಬೆಳಗಿನ ಕಲಾಪದಲ್ಲಿ ನ್ಯಾಯಮೂರ್ತಿ ಅರ ವಿಂದ ಕುಮಾರ್ ಅವರು ವಿಚಾರಣೆ ನಡೆಸಿದರು. ಅರ್ಜಿಯ ನ್ನು ಪರಿಶೀಲಿಸಿದ ನಾಯಮೂರ್ತಿಗಳು ಪೊಲೀಸರ ವಿರುದ್ಧ ಕಿಡಿಕಾರಿದರು.

‘ಹಿಂದು ಧರ್ಮದ ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದವರು ರಸ್ತೆಯಲ್ಲಿ ಓಡಾಡಿಕೊಂಡಿದ್ದರೂ ಏಕೆ ಬಂಧಿಸಲಿಲ್ಲ?ಅನ್ಯಧರ್ಮದ ಬಗ್ಗೆ ಅಪಮಾನಕಾರಿ ಹೇಳಿಕೆ ನೀಡಿದ್ದ ರೆ, ಆ ವೇಳೆಯೂ ಯಾವುದೇ ಕ್ರಮ ಜರುಗಿಸದೆ ಸುಮ್ಮನೆ ಇರುತ್ತಿದ್ರಾ, ನ್ಯಾಯ ಎಂಬುದು ಎಲ್ಲರಿಗೂ ಒಂದೇ ಆಗಿರ ಬೇಕಲ್ಲವೇ?’ ಎಂದು ತೀಕ್ಷ್ಣವಾಗಿ ಪ್ರಶ್ನಿಸುವ ಮೂಲಕ ಯಶವಂತಪುರ ಠಾಣಾ ಇನ್ಸ್‌ಪೆಕ್ಟರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ದಕ್ಷಿಣ ಕನ್ನಡ, ಉಡುಪಿ ಮತ್ತು ಮಡಿಕೇರಿಯಲ್ಲಿ ಧರ್ಮದ ವಿಚಾರವಾಗಿ ಏನೆಲ್ಲಾ ಆಗುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಪ್ರಕರಣ ಸಂಬಂಧ ದೂರು ದಾಖಲಿ ಸಿಕೊಂಡು ಹಲವು ದಿನ ಕಳೆದರೂ ಆರೋಪಿಯನ್ನು ಬಂಧಿಸ ದಿರುವುದು ಸರಿಯಲ್ಲ. ಸಂಜೆ 4.30 ಕ್ಕೆ ಅರ್ಜಿಯನ್ನು ಮತ್ತೆ ವಿಚಾರಣೆಗೆ ತೆಗೆದುಕೊಳ್ಳಲಾಗುವುದು. ಅಷ್ಟರೊಳಗೆ ನರಸಿಂಹ ಮೂರ್ತಿಯನ್ನು ಬಂಧಿಸದಿದ್ದರೆ ಯಶವಂತಪುರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗುವುದು ಎಂದು ನ್ಯಾಯಮೂರ್ತಿಗಳು ತಾಕೀತು ಮಾಡಿ ಎಚ್ಚರಿಕೆ ನೀಡಿದರು. ಸಂಜೆ 4.30 ಕ್ಕೆ ಅರ್ಜಿ ಯನ್ನು ಮತ್ತೆ ವಿಚಾರಣೆಗೆ ಕೈಗೆತ್ತಿಕೊ ಳ್ಳಲಾಯಿತು. ಈ ವೇಳೆ ಸರ್ಕಾರಿ ವಕೀಲರು ವಾದಿಸಿ, ನರಸಿಂಹಮೂರ್ತಿಯನ್ನು ಮಧ್ಯಾಹ್ನ 2.30 ಕ್ಕೆ ಬಂಧಿಸಲಾಗಿದೆ ಎಂದು ನ್ಯಾಯಮೂರ್ತಿಗಳಿಗೆ ಮಾಹಿತಿ ನೀಡಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಮೂರ್ತಿಗಳು, ಅರ್ಜಿಯಲ್ಲಿನ ಮನವಿಯಂತೆ ನರಸಿಂಹ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೀಗಾಗಿ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥ ಪಡಿಸಿದರು. ನರಸಿಂಹ ಮೂರ್ತಿಯನ್ನು ನಗರದ 24 ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago