Featured

ತಿರುಪತಿ ಪ್ರಸಾದ ಪ್ರಕರಣ : ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೊಳಪಡಿಸಿ : ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಧಾರ್ಮಿಕ ಟ್ರಸ್ಟ್ ಗೆ ಬೇಡ  ಹಿಂದೂಯೇತರರ ನೇಮಕ: ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಆಗ್ರಹ

ನವದೆಹಲಿ: ತಿರುಪತಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ತಿರುಪತಿ ಪ್ರಸಾದದ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದರು.

ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಸಚಿವರು ಅಭಿಪ್ರಾಯಿಸಿದರು. ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು!? ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಜೋಶಿ ಆರೋಪಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಮತ್ತೆ ಈ ರೀತಿಯ ವಿಚಾರಗಳು ಮರುಕಳಿಸಬಾರದು. ಆ ನಿಟ್ಟಿನಲ್ಲಿ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸದಾ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲೂ ಎಚ್ಚರ ವಹಿಸಿ: ಆಂಧ್ರಪ್ರದೇಶ ಪ್ರಕರಣದಿಂದ ಕರ್ನಾಟಕ ಸಹ ಎಚ್ಚೆತ್ತುಕೊಳ್ಳಬೇಕು. ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದಗಳನ್ನ ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಸಚಿವ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಧಾರ್ಮಿಕ ಟ್ರಸ್ಟ್ ಗೆ ಬೇಡ  ಹಿಂದೂಯೇತರರ ನೇಮಕ: ಹಿಂದೂ ಧಾರ್ಮಿಕ ಟ್ರಸ್ಟ್ ಗಳಲ್ಲಿ ಹಿಂದೂಯೇತರರನ್ನು ನೇಮಕ ಮಾಡಬಾರದು ಎಂದೂ ಸಚಿವ ಪ್ರಲ್ಹಾದ ಜೋಶಿ ಸರ್ಕಾರಕ್ಕೆ ಆಗ್ರಹಿದ್ದಾರೆ.

Vishwa News 24

Recent Posts

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ -vishwanews24

ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…

16 hours ago

ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ -vishwanews24

*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…

18 hours ago

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

4 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

4 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

4 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

4 days ago