Featured

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ : ಪ್ರಯೋಗಾಲಯ ವರದಿ – vishwanews24

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ ; ಪ್ರಯೋಗಾಲಯ ವರದಿ

ತಿರುಪತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದನ್ನು ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯ, NDDB CALF Ltd ದೃಢಪಡಿಸಿದೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ(ಟಿಡಿಪಿ) ಹೇಳಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿದ ಟಿಡಿಪಿ ವಕ್ತಾರ ಆನಂ ವೆಂಕಟ ರಮಣ ರೆಡ್ಡಿ ಅವರು, ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು,ಪಾಮಾಯಿಲ್,ಸೋಯಾಬಿನ್,ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ ಎಂದರು.

ಪ್ರಯೋಗಾಲಯದ ವರದಿಯು ತುಪ್ಪದ ಮಾದರಿಯಲ್ಲಿ “ದನದ ಕೊಬ್ಬು” ಇರುವಿಕೆಯನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

24 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

24 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago