ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಿಂದೂ ವಿರೋಧಿಗಳ ಹುನ್ನಾರ ಎಂದು ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ಸರಕಾರದ ಅವಧಿಯಲ್ಲಿ ಏಕಾಏಕಿ ಕೆ.ಎಂ.ಎಫ್ ನಂದಿನಿ ತುಪ್ಪ ಖರೀದಿ ರದ್ದುಮಾಡಿ ಕಳಪೆ ಗುಣಮಟ್ಟದ ತುಪ್ಪ ಬಳಕೆಗೆ ಅನುಮತಿ ನೀಡಿ ಹಿಂದೂ ಧರ್ಮದ ಪಾವಿತ್ರ್ಯತೆಗೆ ಹಾನಿ ಮಾಡಿದೆ.
ತಿರುಪತಿ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ತಿರುಪತಿ ಸಹಿತ ಎಲ್ಲಾ ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೇಂದ್ರ ಸರ್ಕಾರ ಈ ಅಕ್ರಮವನ್ನು ಗಂಬೀರವಾಗಿ ಪರಿಗಣಿಸಿ ಭಕ್ತರ ಶ್ರದ್ದಾ ಭಾವನೆಗೆ ಧಕ್ಕೆ ತಂದಿರುವ ಮತಾಂಧ ಶಕ್ತಿಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…