ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು – vishwanews24

Featured, ರಾಷ್ಟ್ರ ನ್ಯೂಸ್

ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು

ಆಂಧ್ರಪ್ರದೇಶ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ ಪಡೆದಿದ್ದಾರೆ.

ತಿರುಮಲ ಒಂದು ಪವಿತ್ರ ದೇವಸ್ಥಾನವಾಗಿದ್ದು ಇಲ್ಲಿನ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಹಾಗಾಗಿ ಇನ್ಮುಂದೆ ದೇವಸ್ಥಾನದಲ್ಲಿ ‘ಏಕಕುಂಡಲವಾಡ ಸ್ವಾಮಿ ಗೋವಿಂದ.. ಗೋವಿಂದ ‘ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧಿಕಾರ ಸ್ವೀಕಾರ – vishwanews24

ಅವರು ತಿರುಮಲ ಬೆಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇನ್ನು ಮುಂದೆ ಬೆಟ್ಟದಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು. ಕೇವಲ ‘ಗೋವಿಂದ.. ಗೋವಿಂದ’ ಎಂಬ ಘೋಷ ಮಾತ್ರ ಕೇಳಿಬರಬೇಕು. ಇದು ಹಿಂದೂಗಳ ಪವಿತ್ರ ದೇವಸ್ಥಾವಾಗಿದ್ದು ಇಲ್ಲಿನ ಪಾವಿತ್ರ್ಯತೆಯನ್ನು ನಾವು ಕಾಪಾಡಬೇಕು. ಇಲ್ಲಿಗೆ ಬರುವ ಭಕ್ತರಿಗೆ ದೇವರ ದರ್ಶನ ಹಾಗೂ ಶಾಂತಿಯುವಾದ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್​, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದು ಹೇಳಿದ್ದಾರೆ.

ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್ – ಒಡಿಶಾ ಬಿಜೆಪಿ ಸರ್ಕಾರದಿಂದ ಮೊದಲ ಭರವಸೆ ಈಡೇರಿಕೆ – vishwanews24

Leave a Reply