Featured

ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು – vishwanews24

ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು

ಆಂಧ್ರಪ್ರದೇಶ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ ಪಡೆದಿದ್ದಾರೆ.

ತಿರುಮಲ ಒಂದು ಪವಿತ್ರ ದೇವಸ್ಥಾನವಾಗಿದ್ದು ಇಲ್ಲಿನ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಹಾಗಾಗಿ ಇನ್ಮುಂದೆ ದೇವಸ್ಥಾನದಲ್ಲಿ ‘ಏಕಕುಂಡಲವಾಡ ಸ್ವಾಮಿ ಗೋವಿಂದ.. ಗೋವಿಂದ ‘ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಅವರು ತಿರುಮಲ ಬೆಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇನ್ನು ಮುಂದೆ ಬೆಟ್ಟದಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು. ಕೇವಲ ‘ಗೋವಿಂದ.. ಗೋವಿಂದ’ ಎಂಬ ಘೋಷ ಮಾತ್ರ ಕೇಳಿಬರಬೇಕು. ಇದು ಹಿಂದೂಗಳ ಪವಿತ್ರ ದೇವಸ್ಥಾವಾಗಿದ್ದು ಇಲ್ಲಿನ ಪಾವಿತ್ರ್ಯತೆಯನ್ನು ನಾವು ಕಾಪಾಡಬೇಕು. ಇಲ್ಲಿಗೆ ಬರುವ ಭಕ್ತರಿಗೆ ದೇವರ ದರ್ಶನ ಹಾಗೂ ಶಾಂತಿಯುವಾದ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್​, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago