ಆಂಧ್ರಪ್ರದೇಶ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ ಪಡೆದಿದ್ದಾರೆ.
ತಿರುಮಲ ಒಂದು ಪವಿತ್ರ ದೇವಸ್ಥಾನವಾಗಿದ್ದು ಇಲ್ಲಿನ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಹಾಗಾಗಿ ಇನ್ಮುಂದೆ ದೇವಸ್ಥಾನದಲ್ಲಿ ‘ಏಕಕುಂಡಲವಾಡ ಸ್ವಾಮಿ ಗೋವಿಂದ.. ಗೋವಿಂದ ‘ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅವರು ತಿರುಮಲ ಬೆಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇನ್ನು ಮುಂದೆ ಬೆಟ್ಟದಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು. ಕೇವಲ ‘ಗೋವಿಂದ.. ಗೋವಿಂದ’ ಎಂಬ ಘೋಷ ಮಾತ್ರ ಕೇಳಿಬರಬೇಕು. ಇದು ಹಿಂದೂಗಳ ಪವಿತ್ರ ದೇವಸ್ಥಾವಾಗಿದ್ದು ಇಲ್ಲಿನ ಪಾವಿತ್ರ್ಯತೆಯನ್ನು ನಾವು ಕಾಪಾಡಬೇಕು. ಇಲ್ಲಿಗೆ ಬರುವ ಭಕ್ತರಿಗೆ ದೇವರ ದರ್ಶನ ಹಾಗೂ ಶಾಂತಿಯುವಾದ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದು ಹೇಳಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…