ರಾಷ್ಟ್ರ ನ್ಯೂಸ್

ತಿಹಾರ್​ ತಿಹಾರ ಜೈಲಿನಲ್ಲಿ ಚಿದಂಬರಂ ಭೇಟಿಯಾದ ಕಾಂಗ್ರೇಸ್ ನಾಯಕರು -Vishwanews24

ನವದೆಹಲಿ: ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಸೋಮವಾರ ತಿಹಾರ್​ ಜೈಲಿಗೆ ತೆರಳಿದ್ದರು. ಅಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಐಎನ್​ಎಕ್ಸ್​ ಮೀಡಿಯಾ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಆ.21ರಂದು ಬಂಧಿಸಿದ್ದರು. ಸೋನಿಯಾ ಹಾಗೂ ಮನಮೋಹನ್​ ಸಿಂಗ್​ ಅವರ ಜತೆ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಕೂಡ ಇದ್ದರು ಎನ್ನಲಾಗಿದೆ.

ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕಾಗಿ ಅದು ಪಿ. ಚಿದಂಬರಂ ಅವರನ್ನು ಅನಗತ್ಯವಾಗಿ ಬಂಧಿಸಿದೆ ಎಂದು ಕಾಂಗ್ರೆಸ್​ ಮೊದಲಿನಿಂದಲೂ ಪ್ರತಿಪಾದಿಸುತ್ತಿದೆ.

ಜಾಮೀನು ಕೋರಿ ದೆಹಲಿ ಹೈಕೋರ್ಟ್​ಗೆ ಚಿದಂಬರಂ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಬಿಐ, ಸರ್ಕಾರದ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಇದರಿಂದ ತೀವ್ರ ಹಿನ್ನಡೆಯಾಗುತ್ತದೆ ಎಂದು ಹೇಳಿದ್ದಾರೆ. ಸೋಮವಾರ ಈ ಅರ್ಜಿಯ ವಿಚಾರಣೆ ನಿಗದಿಯಾಗಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಸೆರೆವಾಸದಲ್ಲಿದ್ದರೆ, ಜೊತೆಗೆ ಕರ್ನಾಟಕದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಬ್ಬರೂ ಒಂದೇ ಕಾರಾಗೃಹದಲ್ಲಿದ್ದಾರೆ. ಇಬ್ಬರ ವಿರುದ್ಧವೂ ಇಡಿ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಪಿ.ಚಿದಂಬರಂ ಅವರನ್ನು ಭೇಟಿಯಾಗಿ ಮನಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಅವರ ಜೊತೆ ಮಾತುಕತೆ ನಡೆಸಿ, ನಿಮ್ಮ ಜತೆ ನಾವಿದ್ದೇವೆ ಎಂದು ಹೇಳುವ ಮೂಲಕ ಆತ್ಮಸ್ಥೈರ್ಯ ತುಂಬಿದ್ದಾರೆ ಎನ್ನಲಾಗಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago