Featured

ತೀರ್ಥಹಳ್ಳಿಯ ಕೂಳೂರಿನಲ್ಲಿ ಹಲ್ಲೆಗೊಳಗಾದ ಗೋರಕ್ಷಕರನ್ನು ಮಣಿಪಾಲ ಕೆ ಎಂ ಸಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ : vishwanews24

ತೀರ್ಥಹಳ್ಳಿಯ ಕೂಳೂರಿನಲ್ಲಿ ಹಲ್ಲೆಗೊಳಗಾದ ಗೋರಕ್ಷಕರನ್ನು ಮಣಿಪಾಲ ಕೆ ಎಂ ಸಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ : vishwanews24

ಬಿಗ್ ಪಾಯಿಂಟ್ ನ್ಯೂಸ್

ಮಣಿಪಾಲ ಕೆಎಂಸಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

  • ತೀರ್ಥಹಳ್ಳಿಯ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ ಪ್ರಕರಣ
  • ಇಬ್ಬರು ಗಾಯಾಳುಗಳಿಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ
  • ಮಣಿಪಾಲ ಕೆಎಂಸಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ
  • ದಾಳಿಗೊಳಗಾದವರ ಆರೋಗ್ಯ ವಿಚಾರಿಸಿದ ಗೃಹ ಸಚಿವರು
  • ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದ್ದ ಘಟನೆ
  • ಗಂಭೀರ ಗಾಯಗೊಂಡಿದ್ದ ಇಬ್ಬರ ಆರೋಗ್ಯ ವಿಚಾರಿಸಿದ ಅರಗ ಜ್ಞಾನೆಂದ್ರ
  • ಕೆಎಂಸಿ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ
  • ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವ ಆರಗ ಜ್ಞಾನೇಂದ್ರ ಸೂಚನೆ
  • ಉಡುಪಿಯ ಮಣಿಪಾಲದಲ್ಲಿರುವ ಕಸ್ತೂರ್ಬಾ ಮೆಡಿಕಲ್ ಆಸ್ಪತ್ರೆ
  • ಗೋಸಾಗಾಟ ತಡೆಯುವ ವೇಳೆ ಇಬ್ಬರ ಮೇಲೆ ಟೆಂಪು ಹತ್ತಿಸಿದ್ದ ದುಷ್ಕರ್ಮಿಗಳು

ಬೇಜ್ಜವಳ್ಳಿ ಬಳಿ ಅಕ್ರಮವಾಗಿ ಜಾನುವಾರು ಸಾಗಣೆ ತಡೆಯಲು ಯತ್ನಿಸಿದ ಸಹೋದರರ ಮೇಲೆ ಜಾನುವಾರು ಕಳ್ಳರು ವಾಹನ ಹತ್ತಿಸಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಗಾಯಾಳುಗಳನ್ನು ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರ ಆರೋಗ್ಯ ವಿಚಾರಿಸಿದ ಗೃಹಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದರು.

ಗಾಯಾಳುಗಳಾಧ ಶಿವಮೊಗ್ಗ ಪಟ್ಟಣ ಸಮೀಪದ ಕಿತ್ತನಗದ್ದೆ ಗ್ರಾಮದ ಚರಣ್ (24), ಕಿರಣ್ (23) ಅವರು ಮೇಳಿಗೆಯಿಂದ ಗೋವುಗಳ ಸಾಗಣೆ ವಿಷಯ ತಿಳಿದು ಬುಲೆಟ್ ಬೈಕ್‌ನಲ್ಲಿ ಬೆನ್ನಟ್ಟಿದ್ದಾರೆ. ವಿಷಯ ತಿಳಿದ ಜಾನುವಾರು ಕಳ್ಳರು ಬೆಜ್ಜವಳ್ಳಿಯ ಸಮೀಪ ಬೈಕ್ ಸವಾರರ ಮೇಲೆ ವಾಹನ ಚಲಾಯಿಸಿ ಪರಾರಿಯಾಗಿದ್ದಾರೆ.

ತಕ್ಷಣ ಎಚ್ಚೆತ್ತುಕೊಂಡ ಸಾರ್ವಜನಿಕರು ಘಟನಾ ಸ್ಥಳದಿಂದ ಪರಾರಿಯಾಗುತ್ತಿದ್ದ ಶಿವಮೊಗ್ಗ ನಗರದ ನವೀದ್ (27) ನನ್ನು ಹಿಡಿದು ಮಾಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮಾಳೂರು ಠಾಣೆ ವಶದಲ್ಲಿದ್ದು, ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

12 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

16 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

16 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

16 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago