ನವದೆಹಲಿ: ತೀವ್ರಗೊಂಡ ರೈತರ ಪ್ರತಿಭಟನೆಯನ್ನು ತಡೆಯಲು ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಕೃಷಿ ಕಾನೂನು ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಬ್ಯಾರಿಕೇಡ್ಗಳನ್ನು ಉಲ್ಲಂಘಿಸಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಅಶ್ರುವಾಯು ಹಾರಿಸಲಾಗಿದೆ. ಉತ್ತರ ದೆಹಲಿಯಲ್ಲಿ ಅನ್ನದಾತರ ಕಿಚ್ಚು ತೀವ್ರಗೊಂಡಿಗೆ. ಕಲ್ಲು ತೂರಾಟವಾಗುತ್ತಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವ ಪೊಲೀಸರ ವಿರುದ್ಧವಾಗಿ ರೈತರು ತಿರುಗಿ ಬಿದ್ದಿದ್ದಾರೆ.
ಇದನ್ನೂ ಓದಿ : ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಜೆಸಿ ಮಾಧುಸ್ವಾಮಿ -Vishwanews24
ರೈತರ ಗುಂಪು ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೇ ಬ್ಯಾರಿಕೇಡ್ ಕಿತ್ತೆಸೆದು ಔಟರ್ ರಿಂಗ್ ರೋಡ್ ಮೂಲಕ ಮುನ್ನುಗ್ಗಲು ಯತ್ನಿಸಿರುವುದಾಗಿ ಅಧಿಕಾರಿಗಳು ಆರೋಪಿಸಿದ್ದಾರೆ. ಟ್ರ್ಯಾಕ್ಟರ್ ರಾಲಿ ಸಂದರ್ಭದಲ್ಲಿ ಟಿಖ್ರಿ ಗಡಿ ಪ್ರದೇಶದಲ್ಲಿ ರೈತರು ಆಡಳಿತಾರೂಢ ಬಿಜೆಪಿಯ ಪೋಸ್ಟರ್ ಅನ್ನು ಹರಿದು ಹಾಕಿರುವುದಾಗಿ ವರದಿ ತಿಳಿಸಿದೆ.
ದೆಹಲಿಯ ಸಂಜಯ್ ಗಾಂಧಿ ಟ್ರಾನ್ಸ್ ಪೋರ್ಟ್ ನಗರದತ್ತ ಟ್ರ್ಯಾಕ್ಟರ್ ರಾಲಿ ಮೂಲಕ ರೈತರು ಒಳಪ್ರವೇಶಿಸಿದಾಗ ಪೊಲೀಸರು ತಡೆದಾಗ ಘರ್ಷಣೆ ನಡೆದಿದ್ದು, ಈ ವೇಳೆ ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…