ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾದ BJP ಮಾಜಿ ಸಚಿವ ಸುರೇಶ್ ಕುಮಾರ್ ; ಐಸಿಯುನಲ್ಲಿ ಚಿಕಿತ್ಸೆ – vishwanews24

Featured, ರಾಜ್ಯ ನ್ಯೂಸ್

ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾದ  ಸಚಿವ ಸುರೇಶ್ ಕುಮಾರ್ ; ಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶ್ ಕುಮಾರ್ ಅವರನ್ನು ದಾಖಲಿಸಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

  ಉಡುಪಿ:  ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ – vishwanews24

ಸುರೇಶ್ ಕುಮಾರ್ ಅವರಿಗೆ ಮೆದುಳಿಗೆ ಜ್ವರ ತಗುಲಿದೆ ಎನ್ನಲಾಗುತ್ತಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್‌ಕುಮಾರ್ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಒಂದು ದಿನ ಭಾಗಿಯಾಗಿದ್ದರು. ಆದರೆ ಇದೀಗ ಕಳೆದ 3-4 ದಿನಗಳ ಹಿಂದೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು.

ನಿನ್ನೆ ರಾತ್ರಿ ಜ್ವರ ತೀವ್ರಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply