ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ 6 ಜಾನುವಾರುಗಳು ಸಾವು – vishwanews24

Featured, ರಾಜ್ಯ ನ್ಯೂಸ್

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ದಾರುಣ ಅಂತ್ಯ ಕಂಡ ಆರು ಜಾನುವಾರುಗಳು

ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಪರಿಣಾಮ ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದಲ್ಲಿ 11 ಕೆವಿಯ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಈ ತಂತಿಯನ್ನು ಸ್ಪರ್ಶಿಸಿದ್ದ 6 ದನಕರುಗಳು ಕರೆಂಟ್ ಶಾಕಿಗೆ ಸ್ಥಳದಲ್ಲೇ ಬಲಿಯಾಗಿವೆ. ಇವು ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ ಅವರಿಗೆ ಸೇರಿದ ಜಾನುವಾರುಗಳಿದ್ದುವು. ದನಕರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಂದಾಯ ಇಲಾಖೆ ಅಧಿಕಾರಿಗಳು.ಹಾಗೂ ವಿದ್ಯುತ್ ಸರಬರಾಜು ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ; ತಗ್ಗು ಪ್ರದೇಶಗಳು ಜಲಾವೃತ – vishwanews24

Leave a Reply