ತುಮಕೂರು: ಸ್ಕೂಟರ್ ನಲ್ಲಿ ಕ್ಯಾನ್ ಇಟ್ಟು ಅದಕ್ಕೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೃತಳನ್ನು 18 ವರ್ಷದ ಭವ್ಯ ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡು ಸ್ಕೂಟಿ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿರಾ ತಾಲ್ಲೂಕಿನ ಜವನಹಳ್ಳಿ ನಿವಾಸಿಗಳಾದ ತಾಯಿ ರತ್ನಮ್ಮ ಮತ್ತು ಮಗಳು ಭವ್ಯ ಪೆಟ್ರೋಲ್ ಬಂಕಿಗೆ ಬಂದಿದ್ದರು. ಸ್ಕೂಟಿ ವಾಹನದ ಮೇಲೆ ಕ್ಯಾನ್ ಇಟ್ಟು ಪೆಟ್ರೋಲ್ ತುಂಬಿಸುತ್ತಿದ್ದರು. ಭವ್ಯ ಈ ವೇಳೆ, ಸ್ಕೂಟಿಯಲ್ಲಿ ಕುಳಿತುಕೊಂಡಿದ್ದು ಬೆಂಕಿ ಮೈಗೆ ಹತ್ತಿಕೊಂಡಿದೆ. ಅಕಸ್ಮಾತ್ ಬೆಂಕಿ ಹತ್ತಿದ್ದು ಪೆಟ್ರೋಲ್ ಕ್ಯಾನ್ ಸಹಿತ ಧಗ ಧಗನೆ ಹೊತ್ತಿ ಉರಿದಿದೆ. ಭವ್ಯಾ ಬೆಂಕಿಯ ಜ್ವಾಲೆಯೊಂದಿಗೆ ಓಡಿ ಕೆಳಕ್ಕೆ ಬಿದ್ದಿದ್ದಾಳೆ.
ಬಳಿಕ ಆಕೆಯನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾಳೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…