ತುಮಕೂರು: ಬಜರಂಗದಳದ ಜಿಲ್ಲಾ ಸಂಚಾಲಕ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರೋದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ತುಮಕೂರು ಬಂದ್ ಗೆ ಕರೆ ನೀಡಿದೆ.
ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಇತರ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬಂದ್ಗೆ ಕರೆ ಕೊಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಹಿಂದೂಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಗೋ ಸಂರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಮುಂದುವರೆದಿದೆ. ನಗರದಲ್ಲಿ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ನಗರ ಶಾಸಕ ಜ್ಯೋತಿಗಣೇಶ್, ವಿಶ್ವದಲ್ಲಿ ಹಿಂದೂಗಳಿಗೆ ಮುಕ್ತವಾಗಿರುವ ದೇಶ ಅಂದರೆ ಅದು ಭಾರತ ಮಾತ್ರ. ಇಲ್ಲೂ ಈ ರೀತಿ ದೌರ್ಜನ್ಯಗಳು ನಡೆದರೆ ಹಿಂದೂಗಳನ್ನು ಅರಬ್ಬೀ ಸಮುದ್ರಕ್ಕೆ ಎಸೆಯಬೇಕಾಗುತ್ತದೆ. ಹಾಗಾಗಿ ಹಿಂದೂ ಸಮಾಜ ಒಗ್ಗಟ್ಟಾಗಿ ನಮ್ಮ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಬೇಕು ಎಂದು ಕರೆ ನೀಡಿದರು.
ಏನಿದು ಪ್ರಕರಣ?:
ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ನಡೆದಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಚಿಕಿತ್ಸೆಗಾಗಿ ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸ್ಸೋ ಇಚ್ಛೆ ರಾಡ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…