Featured

ತುಮಕೂರು: ಮಹಿಳಾ PSI ಜೊತೆ ಅಸಭ್ಯ ವರ್ತನೆ, ನಿಂದನೆ ಆರೋಪ – ಯೂತ್ ಕಾಂಗ್ರೆಸ್ ಅಧ್ಯಕ್ಷನ ಬಂಧನ – Vishwanews24

ತುಮಕೂರು: ಮಹಿಳಾ PSI ಜೊತೆ ಅಸಭ್ಯ ವರ್ತನೆ, ನಿಂದನೆ ಆರೋಪ – ಯೂತ್ ಕಾಂಗ್ರೆಸ್ ಅಧ್ಯಕ್ಷನ ಬಂಧನ

ತುಮಕೂರು,: ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸೆಕ್ಸನ್ ಅಡಿ ಬಂಧಿಸಲಾಗಿದೆ.

ಪ್ರಕರಣವೊಂದರಲ್ಲಿ ವಶಕ್ಕೆ ಪಡೆದ ನಾಲ್ವರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಶಶಿ ಹುಲಿಕುಂಟೆ ಪೊಲೀಸರಿಗೆ ಧಮಕಿ ಹಾಕಿದ್ದಾನೆ. ಬಿಡಲು‌ ಸಾಧ್ಯ ಇಲ್ಲ ಎಂದಾಗ ಇನ್ನು 3 ತಿಂಗಳು ಕಾಯಿರಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾನೆ. ವಶಕ್ಕೆ ಪಡೆದ 4 ಜನರ ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲನ್ನು ಕದ್ದಿದ್ದಾರೆ ಎಂದು ಠಾಣೆ ಎದುರು ಪ್ರತಿಭಟನೆ ಮಾಡುತ್ತೇನೆ ಎಂದು ಆವಾಜ್ ಹಾಕಿದ್ದಾನೆ.

ಈ ವೇಳೆ ಶಶಿ ಹುಲಿಕುಂಟೆ ಮಾತಿಗೆ ಮಹಿಳಾ ಪಿಎಸ್‌ಐ ಪ್ರತಿರೋಧ ಒಡ್ಡಿದಾಗ, ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಠಾಣೆಯಲ್ಲಿದ್ದ 4 ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರಿಗೆ ಯಾಮಾರಿಸಿ ಎಸ್ಕೇಪ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಶಿ ಹುಲಿಕುಂಟೆಯನ್ನು ಐಪಿಸಿ ಸೆಕ್ಸನ್- 353, 507ರ ಅಡಿ ಬಂಧಿಸಿ 3ನೇ ಹೆಚ್ಚುವರಿ ಜೆಎಮ್‌ಎಫ್‌ಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago