ತುಮಕೂರು,: ಮಹಿಳಾ ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸೆಕ್ಸನ್ ಅಡಿ ಬಂಧಿಸಲಾಗಿದೆ.
ಪ್ರಕರಣವೊಂದರಲ್ಲಿ ವಶಕ್ಕೆ ಪಡೆದ ನಾಲ್ವರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಶಶಿ ಹುಲಿಕುಂಟೆ ಪೊಲೀಸರಿಗೆ ಧಮಕಿ ಹಾಕಿದ್ದಾನೆ. ಬಿಡಲು ಸಾಧ್ಯ ಇಲ್ಲ ಎಂದಾಗ ಇನ್ನು 3 ತಿಂಗಳು ಕಾಯಿರಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾನೆ. ವಶಕ್ಕೆ ಪಡೆದ 4 ಜನರ ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲನ್ನು ಕದ್ದಿದ್ದಾರೆ ಎಂದು ಠಾಣೆ ಎದುರು ಪ್ರತಿಭಟನೆ ಮಾಡುತ್ತೇನೆ ಎಂದು ಆವಾಜ್ ಹಾಕಿದ್ದಾನೆ.
ಈ ವೇಳೆ ಶಶಿ ಹುಲಿಕುಂಟೆ ಮಾತಿಗೆ ಮಹಿಳಾ ಪಿಎಸ್ಐ ಪ್ರತಿರೋಧ ಒಡ್ಡಿದಾಗ, ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಠಾಣೆಯಲ್ಲಿದ್ದ 4 ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರಿಗೆ ಯಾಮಾರಿಸಿ ಎಸ್ಕೇಪ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಶಿ ಹುಲಿಕುಂಟೆಯನ್ನು ಐಪಿಸಿ ಸೆಕ್ಸನ್- 353, 507ರ ಅಡಿ ಬಂಧಿಸಿ 3ನೇ ಹೆಚ್ಚುವರಿ ಜೆಎಮ್ಎಫ್ಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…