ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು (ಜನವರಿ 03) ಡಿಜಿ ಆದೇಶ ಹೊರಡಿಸಿದ್ದಾರೆ.
ಘಟನೆ ಹಿನ್ನೆಲೆ
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.
ಆದರೆ, ಡಿವೈಎಸ್ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್ಪಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…